ಮನೆಯಂಗಳದಲ್ಲಿ 7 ಅಡಿ ಉದ್ದದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ‌ ಕಾಡಿಗೆ ಬಿಟ್ಟ ಉರಗ ಪ್ರೇಮಿಗಳು 

Source: SO News | By MV Bhatkal | Published on 19th July 2024, 5:49 PM | Coastal News | Don't Miss |

ಭಟ್ಕಳ ಕರಾವಳಿ ಭಾಗದಲ್ಲಿ ಮಳೆಯು  ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕಾಡಿನಿಂದ ಮನೆಗಳತ್ತ ಹಾವುಗಳು ಬರುತ್ತಿದ್ದು ತಾಲೂಕಿನ ಮುಟ್ಟಳಿ ಪಂಚಾಯತ್ ವ್ಯಾಪ್ತಿಯ ಕೃಷ್ಣಮೂರ್ತಿ ಶೆಟ್ಟಿ ಎನ್ನುವವರ ಮನೆಯಂಗಳದಲ್ಲಿ ಸುಮಾರು 7 ಅಡಿ ಉದ್ದದ  10ರಿಂದ 20 ಕೆಜಿಗೂ ಅಧಿಕ ತೂಕವಿರುವ ಹೆಬ್ಬಾವೊಂದು ಪತ್ತೆಯಾಗಿದ್ದು,ಉರಗ ಪ್ರೇಮಿಗಳು ಸುರಕ್ಷಿತವಾಗಿ ಹೆಬ್ಬಾವು ಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟ ಘಟನೆ ನಡೆದಿದೆ.

ಮನೆಯಂಗಳದಲ್ಲಿ ನೋಡಿದ ಈ ಬೃಹದಾಕಾರದ ಹೆಬ್ಬಾವು ನೋಡಿ ಮನೆಯವರು ಮತ್ತು ಅಕ್ಕಪಕ್ಕದವರ ಆತಂಕಕ್ಕೆ ಕಾರಣವಾಗಿತ್ತು,ಹಾವನ್ನು ರಕ್ಷಿಸುವಂತೆ ಮನೆ ಮಾಲೀಕರಾದ ಕೃಷ್ಣಮೂರ್ತಿ ಶೆಟ್ಟಿ ಅವರು ಸ್ಥಳೀಯ ಉರಗ ಪ್ರೇಮಿ ಒಬ್ಬರಿಗೆ ದೂರವಾಣಿಯ ಮೂಲಕ ಸಂಪರ್ಕಿಸಿದ್ದು, ಸ್ಥಳಕ್ಕೆ ಆಗಮಿಸಿದ‌ ಉರಗ ಪ್ರೇಮಿ ಗಳಾದ ರಾಘ ನಾಯ್ಕ ಮುಟ್ಟಳಿ ಹಾಗೂ‌ ಮಾದೇವ ನಾಯ್ಕ ಪುರವರ್ಗ ಅವರು ಸ್ಥಳೀಯರ ಸಹಕಾರದೊಂದಿಗೆ ಮನೆಯ ಪಕ್ಕದಲ್ಲಿ ಇದ್ದ ಕಂಪೌಂಡ್ ಒಂದರಲ್ಲಿ ಅಡಗಿಕೊಂಡಿದ್ದ ಹೆಬ್ಬಾವನ್ನು ಪ್ರಯಾಸ ಪಟ್ಟು ಹಾವಿನ ಬಾಲ ಹಿಡಿದು, ನಿಧಾನವಾಗಿ ಹೆಬ್ಬಾವನ್ನು ಮೇಲೆತ್ತುತ್ತ ಕಂಪೌಂಡ್ ಸಂದಿ ಯಲ್ಲಿ ಹೆಬ್ಬಾವು ಮತ್ತೆ ಮತ್ತೆ ತಪ್ಪಿಸಿಕೊಳ್ಳಲು ಕೊಳ್ಳುತ್ತಿದ್ದು ಅದಕ್ಕೆ ಅವಕಾಶ ನೀಡದ ರಾಘ ನಾಯ್ಕ,ಹಾಗೂ ಮಾದೇವ ನಾಯ್ಕ ಸುಮಾರು ಅರ್ಧ ಗಂಟೆ ಕಾಲ‌ ಕಾರ್ಯಾಚರಣೆ ನಡೆಸಿ ಹಾವನ್ನು ಹಿಡಿದು ಸುರಕ್ಷಿತವಾಗಿ ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ.

Read These Next

ಕರಾಟೆ ಪಟು ದಿ.ಕಾಶಿಫ್ ಸ್ಮರಣಾರ್ಥ; ಅ.20 ರಂದು ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿಯಿಂದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್

ಭಟ್ಕಳ: ಆಝಾದ್ ನಗರದ ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿ (AKFA), ಸಂಸ್ಥೆಯು ಕರಾಟೆ ಪಟು ದಿ.ಕಾಶಿಫ್ ರುಕ್ನುದ್ದೀನ ಸ್ಮರಣಾರ್ಥ ಅ.20 ...

16 ವರ್ಷದ ಮಕ್ಕಳಲ್ಲಿ ಪ್ರತಿರಕ್ಷಣಾತ್ಮಕ ಶಕ್ತಿ ವೃದ್ಧಿಸಲು ಭಟ್ಕಳದಲ್ಲಿ ಮಕ್ಕಳ ಲಸಿಕೆ ಅಭಿಯಾನಕ್ಕೆ ಚಾಲನೆ

ಭಟ್ಕಳ: ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವ ಮಹತ್ವದ ಪ್ರಯತ್ನದಲ್ಲಿ, ಸ್ಥಳೀಯ ಆರೋಗ್ಯ ಅಧಿಕಾರಿಗಳು ಭಟ್ಕಳದ ...

ಕಾರವಾರ: ಫೇಶಿಯಲ್ ರೆಕಗ್ನೇಶನ್ ಹಾಜರಾತಿ ರಾಜ್ಯಾದ್ಯಂತ ಜಾರಿಗೆ ಚಿಂತನೆ ; ರಿತೇಶ್ ಕುಮಾರ್ ಸಿಂಗ್

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಮೊಬೈಲ್‌ನಲ್ಲಿ ಫೇಶಿಯಲ್ ರೆಕಗ್ನೇಶನ್ ಮೂಲಕ ...

ಬೆಂಗಳೂರು: ನಿರ್ದೇಶನಾಲಯದ ಕಚೇರಿಯಲ್ಲಿ ಮಾಹಿತಿ ತಂತ್ರಜ್ಞರ ಸೇವೆ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ಕಛೇರಿಯಲ್ಲಿ ಇಲಾಖೆಯ ಯೋಜನೆಗಳನ್ನು ಸಮಪರ್ಕವಾಗಿ ಇ-ಆಫೀಸ್ ತಂತ್ರಾಂಶ ...