ಹೊನ್ನಾವರದಲ್ಲಿ ಆಂಧ್ರ ವ್ಯಕ್ತಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿ

Source: SO News | By Laxmi Tanaya | Published on 3rd September 2024, 7:39 AM | State News |

ಹೊನ್ನಾವರ :  ತಾಲೂಕಿನ ಗೇರುಸೊಪ್ಪ  ಬಳಿ ವ್ಯಕ್ತಿಯೊರ್ವನನ್ನ ಕೊಲೆಗೈದು ಮೃತದೇಹ ಬಿಸಾಡಿ ಪರಾರಿಯಾದ ಘಟನೆ  ನಡೆದಿದೆ.

ಆಂಧ್ರಪ್ರದೇಶ ಮೂಲದ ಭೋಜನಪು ಶಾಂಭಸಿವ (39) ಕೊಲೆಯಾದ ವ್ಯಕ್ತಿ. ಅಣ್ಣಮಯ್ಯ  ಜಿಲ್ಲೆಯ ಕಳಕಡ ಮಂಡಲದ ತಿಪ್ಪಿಗರಿಪಲ್ಲಿ ಗ್ರಾಮದವನಾಗಿದ್ದ. ಆಗಸ್ಟ್ 24 ರಂದು  ಶಾಂಭಸಿವ ಮನೆಯಿಂದ ಕಾಣೆಯಾದ  ಬಗ್ಗೆ ಕಳಕಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಟ್ಯಾಕ್ಸಿ ಚಾಲಕನಾಗಿದ್ದ ಈತನಿಗೆ ಬಾಡಿಗೆ ನೆಪದಲ್ಲಿ ಮೂವರು ವ್ಯಕ್ತಿಗಳು  ಹೊನ್ನಾವರ ಕಡೆ ಕರೆ ತಂದಿದ್ದರೆನ್ನಲಾಗಿದೆ .

ಹೊನ್ನಾವರದಿಂದ ಸಾಗರ ಮಾರ್ಗವಾಗಿ ತೆರಳುತ್ತಿದ್ದಾಗ ಗೇರುಸೊಪ್ಪ ವ್ಯೂ ಪಾಯಿಂಟ್ ನಿಂದ ಸುಮಾರು ದೂರದಲ್ಲಿ ಕೊಲೆ ಮಾಡಿ ಎಸೆದು ಹೋಗಿದ್ದಾರೆ. ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಂಧ್ರ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Read These Next

ದೇಗುಲ ಪ್ರವೇಶಿಸಿದ್ದಕ್ಕೆ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಸವರ್ಣೀಯರಿಂದ ಹಲ್ಲೆ;21 ಮಂದಿಯ ಬಂಧನ

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕನ ಮೇಲೆ ಸವರ್ಣೀಯರು ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ...

ವಿಶ್ವದಾಖಲೆಯ ಪ್ರಜಾಪ್ರಭುತ್ವದ ಸರಪಳಿ; 2,500 ಕಿ.ಮೀ. ವ್ಯಾಪ್ತಿಯಲ್ಲಿ ಮಾನವ ಸರಪಳಿ ಯಶಸ್ವಿ; ಸಿಎಂ, ಸಚಿವರು, ಶಾಸಕರು ಸಹಿತ 31 ಜಿಲ್ಲೆಗಳಿಂದ ಲಕ್ಷಾಂತರ ನಾಗರಿಕರು, ವಿದ್ಯಾರ್ಥಿ-ಯುವಜನರು ಭಾಗಿ

ಅಂತರ್ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯ ಸರಕಾರದ ಸಮಾಜ ಕಲ್ಯಾಣ ಇಲಾಖೆಯು ಹಮ್ಮಿಕೊಂಡಿದ್ದ ಮಾನವ ಸರಪಳಿ ...

ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗಾಗಿ ಜಿಲ್ಲಾಡಳಿತಕ್ಕೆ ಸಮಗ್ರ ಮಾರ್ಗಸೂಚಿಗಳು

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಬೀದರ್‍ನಿಂದ ಚಾಮರಾಜನಗರದವೆರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ...

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ಹಿಂಸೆಯನ್ನು ಅಳವಡಿಸಿ, ಖಾಸಗಿ ವೀಡಿಯೋಗಳನ್ನು ಚಿತ್ರೀಕರಿಸಿ ಮಾಧ್ಯಮಗಳಲ್ಲಿ ಪ್ರಸಾರ ...