ಭಟ್ಕಳದಲ್ಲಿ ಪ್ರಮುಖ ರೈಲುಗಳನ್ನು ನಿಲುಗಡೆಗೊಳಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಮನವಿ

Source: S O news | By Staff Correspondent | Published on 7th October 2023, 5:45 PM | Coastal News |

ಭಟ್ಕಳ: ಭಟ್ಕಳದ ಮೂಲಕ ಮಂಗಳೂರು, ಉಡುಪಿ ಕೇರಳ ಸಂಪರ್ಕಿಸುವ ವಿವಿಧ ಪ್ರಮುಖ ರೈಲುಗಳನ್ನು ಭಟ್ಕಳದಲ್ಲಿ ನಿಲುಗಡೆಗೆ ಆಗ್ರಹಿಸಿ ತಂಝೀಮ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಶನಿವಾರ ಕೇಂದ್ರ ರೈಲು ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಭಟ್ಕಳ ತಾಲೂಕು ಒಂದು ಪ್ರಮುಖ ಪ್ರವಾಸಿ ತಾಣವಾಗಿದ್ದು ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ದೇಶದಾದ್ಯಂತ ಪ್ರವಾಸಿಗರು ಭಟ್ಕಳ, ಮುರುಢೇಶ್ವರವನ್ನು ಕಣ್ತುಂಬಿಕೊಳ್ಳಲು ಭಟ್ಕಳ ನಗರಕ್ಕೆ ಬೇಟಿ ನೀಡುತ್ತಾರೆ. ಅಲ್ಲದೆ ಭಟ್ಕಳದ ಬಹುತೇಕರು ಗಲ್ಫ್ ಮತ್ತಿತರ ರಾಷ್ಟ್ರಗಳಲ್ಲಿ ಹಾಗೂ ನಮ್ಮ ದೇಶದ ವಿವಿಧ ರಾಜ್ಯಗಳಲ್ಲಿ ವಾಸಿಸುತ್ತಾರೆ.

ಇಲ್ಲಿನ ಜನರ ಅನುಕೂಲಕ್ಕಾಗಿ ರೈಲು ಸಂಖ್ಯೆ. 19258/19259 - ಕೊಚುವೇಲಿ ಭಾವನಗರ ಎಕ್ಸ್‌ಪ್ರೆಸ್, 16312/16313 - ಕೊಚುವೇಲಿ ಗಾಣಗಾನಗರ ಎಕ್ಸ್‌ಪ್ರೆಸ್, 16633/16634 - ತಿರುವನಂತಪುರ ವೆರಾವಲ್ ಎಕ್ಸ್‌ಪ್ರೆಸ್, 16335/16336 - ನಾಗರ್‌ಕೋಯಿಲ್ ಗಾಂಧಿ ಧಾಮ್ ಎಕ್ಸ್‌ಪ್ರೆಸ್, 22148/22149 - ಎರ್ನಾಕುಲಂ ಪುಣೆ ಸೂಪರ್‌ಫಾಸ್ಟ್ (ಎರಡು ವಾರಕ್ಕೊಮ್ಮೆ), 12201/12202 - ಕೊಚುವೇಲಿ ಮುಂಬೈ LTT (ದ್ವಿ-ವಾರ), 12431/12432 - ತಿರುವನಂತಪುರ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ (ತ್ರಿ-ಸಾಪ್ತಾಹಿಕ)  ರೈಲುಗಳನ್ನು ಭಟ್ಕಳದಲ್ಲಿ ನಿಲುಗೊಳಿಸುವಂತೆ ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ.  

ಭಟ್ಕಳವು ಒಂದು ಪ್ರಮುಖ ವ್ಯಾಪಾರ ಕೇಂದ್ರವೂ ಆಗಿದ್ದು ಬೇರೆ ಬೇರೆ ರಾಜ್ಯದ ಜನರು ಇಲ್ಲಿಗೆ ಬರುತ್ತಾರೆ ಮತ್ತು ಇಲ್ಲಿಯ ಜನರು ಬೇರೆ ರಾಜ್ಯಗಳಿಗೆ ಪ್ರಯಾಣಿಸುತ್ತಾರೆ. ಅಲ್ಲದೆ ನಿತ್ಯವೂ ನೂರಾರು ಮಂದಿ ಉಡುಪಿ, ಮಂಗಳೂರು, ಕೇರಳಕ್ಕೆ ಆರೋಗ್ಯ, ವ್ಯಾಪಾರ, ಶಿಕ್ಷಣದ ಉದ್ದೇಶಕ್ಕಾಗಿ ಪ್ರಯಾಣಿಸುತ್ತಲೇ ಇರುತ್ತಾರೆ.  ಈ ಎಲ್ಲದರ ಹಿನ್ನೆಲೆಯಲ್ಲಿ ಕೂಡಲೇ ಕಾರ್ಯಪ್ರವೃತ್ತಗೊಂಡು ಭಟ್ಕಳ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಬೇಕೆಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ತಂಝೀಮ್ ಸಂಸ್ಥೆಯ ಉಪಾಧ್ಯಕ್ಷ ಹಾಗೂ ರಾಬಿತಾ ಸೂಸೈಟಿಯ ಪ್ರಧಾನ ಕಾರ್ಯದರ್ಶಿ ಉದ್ಯಮಿ ಡಾ.ಅತಿಕುರ‍್ರಹ್ಮಾನ್ ಮುನೀರಿ, ಭಟ್ಕಳ ನಾಗರೀಕ ಹಿತ ರಕ್ಷಣ ವೇದಿಕೆ ಹಾಗೂ ಸದ್ಭಾವನಾ ಮಂಚ್ ನ ಅಧ್ಯಕ್ಷ ಸತೀಶ್ ಕುಮಾರ್ ನಾಯ್ಕ, ಭಟ್ಕಳ ಮುಸ್ಲಿಮ್ ಯುತ್ ಫೆಡರೇಶನ್ ಅಧ್ಯಕ್ಷ ಮೌಲಾನ ಅಝೀಝುರ‍್ರಹ್ಮಾನ್ ರುಕ್ನುದ್ದೀನ್, ಜೆ.ಸಿ.ಐ ನ ಅಬ್ದುಲ್ ಜಬ್ಬಾರ್, ಜಾವೀದ್ ಮುಕ್ರಿ, ಶಾಹೀನಾ ಶೇಖ್, ಸಿಟಿ ಮೆಡಿಕಲ್ ಇಕ್ಬಾಲ್ ಮತ್ತಿತರರು ಉಪಸ್ಥಿತರಿದ್ದರು.

Leaders Advocate for Bhatkal Stoppage on Key Train Routes, Present Memorandum to Railway Authorities

Read These Next

ಭಟ್ಕಳ: ತಹಶೀಲ್ದಾರ್ ಮತ್ತು ಸಹಾಯಕ ಆಯುಕ್ತರ ಕಛೇರಿಗಳ ಸಿಬ್ಬಂದಿ ವರ್ಗಾವಣೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ

ಭಟ್ಕಳ: ಹಲವು ವರ್ಷಗಳಿಂದ ತಹಶೀಲ್ದಾರ್ ಕಛೇರಿ ಮತ್ತು ಸಹಾಯಕ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ...

ಜಾಲಿಯಲ್ಲಿ ಬೀಚ್ ಸ್ವಚ್ಛತಾ ಅಭಿಯಾನ: ಅಂಜುಮನ್ ಬಿಎಡ್ ವಿದ್ಯಾರ್ಥಿಗಳಿಂದ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

ಭಟ್ಕಳ: ಅಂಜುಮನ್ ಕಾಲೇಜ್ ಆಫ್ ಎಜುಕೇಶನ್ (ಬಿಎಡ್) ವಿದ್ಯಾರ್ಥಿಗಳು ಜಾಲಿ ಬೀಚ್‌ನಲ್ಲಿ ಗುರುವಾರ ಬೀಚ್ ಸ್ವಚ್ಛತಾ ಅಭಿಯಾನವನ್ನು ...

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡದ ಕ್ರಮಕ್ಕೆ ಸಂಸದ ಕಾಗೇರಿ ಕಿಡಿ: ಸೇಡಿನ ರಾಜಕೀಯ ಆರೋಪ

ಭಟ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಮಾನ ಮರ್ಯಾದೆ ರಾಷ್ಟ್ರಮಟ್ಟದಲ್ಲಿ ದಿನದಿಂದ ದಿನಕ್ಕೆ ಹರಾಜಾಗುತ್ತಿದೆಯಾದರೂ, ...

ಕಾರವಾರ: ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ; ಈಶ್ವರ್ ಕಾಂದೂ

ಉತ್ತರ ಕನ್ನಡ​​​​​​​ ಜಿಲ್ಲೆಯಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕೆಂದು ಜಿಲ್ಲಾ ...