ಕೇಜ್ರವಾಲ್‌ಗೆ ಜಾಮೀನು; ಬಂಧನದ ಕಾನೂನುಬದ್ಧತೆ ಬಗ್ಗೆ ನ್ಯಾಯಾಧೀಶರಲ್ಲಿ ಭಿನ್ನಾಭಿಪ್ರಾಯ

Source: Vb | By I.G. Bhatkali | Published on 14th September 2024, 8:41 AM | National News |

ಹೊಸದಿಲ್ಲಿ: ಅಭಿವೃದ್ಧಿ ಹೊಂದಿದ ಸಮಾಜಕ್ಕಾಗಿ ಸುಧಾರಿತ ನ್ಯಾಯವ್ಯವಸ್ಥೆಯೊಂದು ಯೊಂದು ಬೇಕು, ವಿಚಾರಣೆ ನಡೆಯುತ್ತಿರುವಾಗ ಆರೋಪಿಗಳನ್ನು ಸುದೀರ್ಘಾವಧಿಗೆ ಜೈಲಿನಲ್ಲಿ ಇರಿಸುವುದು ಸಮರ್ಥನೀಯವಲ್ಲ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಅಭಿಪ್ರಾಯಪಟ್ಟರು.

ಆದರೆ, ಇಬ್ಬರೂ ನ್ಯಾಯಾಧೀಶರು ಸರ್ವಾನುಮತದಿಂದ ಜಾಮೀನು ನೀಡಿದರೂ, ಕೇಜ್ರವಾಲ್‌ರನ್ನು ಸಿಬಿಐ ಬಂಧಿಸಿರುವುದು ಕಾನೂನುಬದ್ದವೇ ಎಂಬ ವಿಚಾರದಲ್ಲಿ ನ್ಯಾಯಾಧೀಶರು ಭಿನ್ನ ತೀರ್ಪುಗಳನ್ನು ನೀಡಿದರು.

ಸಿಬಿಐಯು ಕೇಜ್ರವಾಲ್‌ರನ್ನು ಬಂಧಿಸಿರುವುದು ಕಾನೂನುಬದ್ಧವೇ ಎಂಬ ವಿಷಯದ ಬಗ್ಗೆ, ಬಂಧನವು ಕಾನೂನುಬದ್ಧವಾಗಿದೆ ಮತ್ತು ಸಾಂದರ್ಭಿಕ ಕಾನೂನುಗಳಿಗೆ ಅನುಗುಣವಾಗಿದೆ ಎಂದು ನ್ಯಾ. ಸೂರ್ಯಕಾಂತ್ ಹೇಳಿದರು.

ಇನ್ನೊಂದು ಪ್ರಕರಣದಲ್ಲಿ ಈಗಾಗಲೇ ಕಸ್ಟಡಿಯಲ್ಲಿರುವ ವ್ಯಕ್ತಿಯನ್ನು ತನಿಖೆಯ ಉದ್ದೇಶಕ್ಕಾಗಿ ಬಂಧಿಸುವುದರಲ್ಲಿ ತಪ್ಪಿಲ್ಲ. ಬಂಧನವು ಯಾಕೆ ಅಗತ್ಯವಾಯಿತು ಎನ್ನುವುದನ್ನು ಸಿಬಿಐ ತನ್ನ ಅರ್ಜಿಯಲ್ಲಿ ತಿಳಿಸಿದೆ. ಇಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ 41(ಎ) (3) ವಿಧಿಯ ಉಲ್ಲಂಘನೆಯಾಗಿಲ್ಲ' ಎಂದು ಅವರು ಅಭಿಪ್ರಾಯಪಟ್ಟರು.

ಆದರೆ, ಇದಕ್ಕೆ ಭಿನ್ನವಾದ ಅಭಿಪ್ರಾಯ ವ್ಯಕ್ತಪಡಿಸಿರುವ ನ್ಯಾ, ಭುಯಾನ್, ಬಂಧನ ಅಗತ್ಯವಾಗಿರಲಿಲ್ಲ ಮತ್ತು ಕಿರುಕುಳ ಕೊಡುವ ಉದ್ದೇಶಕ್ಕಾಗಿ ಬಂಧನದ ಅಧಿಕಾರವನ್ನು ದುರುಪಯೋಗಪಡಿಸಬಾರದು ಎಂದು ಹೇಳಿದ್ದಾರೆ.

Read These Next

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರಾಜಿನಾಮೆ ನಿಡ್ತಾರಾ? ಹಾಗಾದ್ರೆ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ?

ಹೊಸದಿಲ್ಲಿ : ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ನಿಜವಾಗ್ಲೂ ...

“ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರ್ಯವಂತ” ಸೆ.13-22 ರಾಜ್ಯವ್ಯಾಪಿ “ಸೀರತ್’ ಅಭಿಯಾನ

ಬೆಂಗಳೂರು: ಪ್ರವಾದಿ ಮುಹಮ್ಮದ್ ಅವರ ಜನ್ಮ ತಿಂಗಳ ಪ್ರಯುಕ್ತ ಅವರ ಮಾನವೀಯ ಹಾಗೂ ಚಾರಿತ್ರ್ಯದ ಮೂಲಕ ಸಮಾಜಕ್ಕೆ ತೋರಿಸಿಕೊಟ್ಟಿರುವ ...