ಭಟ್ಕಳ: ಚಿತ್ರಾಪುರದ ಮನೆಗೆ ಕನ್ನ ಹಾಕಿದ ಕಳ್ಳರು; ಚಿನ್ನಾಭರಣ ಕಳುವು

Source: S O News | By I.G. Bhatkali | Published on 11th June 2023, 11:24 AM | Coastal News | Don't Miss |

ಭಟ್ಕಳ: ಮನೆಯಲ್ಲಿ ಯಾರೂ ಇಲ್ಲದನ್ನು ಖಚಿತಪಡಿಸಿಕೊಂಡ ಅನಾಮಿಕ ಕಳ್ಳರು, ಮನೆಯ ಬಾಗಿಲನ್ನು ಒಡೆದು ಒಳ ಪ್ರವೇಶಿಸಿ ಲಕ್ಷಾಂತರ ರು. ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ತಾಲೂಕಿನ ಚಿತ್ರಾಪುರದಲ್ಲಿ ಶನಿವಾರ ಸಂಜೆ ಬೆಳಕಿಗೆ ಬಂದಿದೆ.

ತಾಲೂಕಿನ ಚಿತ್ರಾಪುರ ಸಾರಸ್ವತ ಕಾಲನಿಯ ನಿವಾಸಿ ಮಹೇಶ ಪಂಡಿತ ಎಂಬುವವರ ಮನೆ ಇದಾಗಿದ್ದು, ಜೂ. 8 ರಂದು ತಮ್ಮ ಸಹೋದರ ಮೃತರಾದ ಸುದ್ದಿ ತಿಳಿದು ಕುಟುಂಬ ಸಮೇತರಾಗಿ ಮುಂಬೈಗೆ ಪ್ರಯಾಣ ಬೆಳೆಸಿದ್ದರು. ಎಂದು ತಿಳಿದುಬಂದಿದೆ.

ಶನಿವಾರ ಸಂಜೆ ಪಕ್ಕದ ಮನೆಯವರು ಮನೆಯ ಬಾಗಿಲ ತೆರೆದಿರುವುದನ್ನು ನೋಡಿ ಅಲ್ಲಿಗೆ ತೆರಳಿದ್ದು ಕಳ್ಳತನದ ಘಟನೆ, ಬೆಳಕಿಗೆ ಬಂದಿದೆ. ಮನೆಯಲ್ಲಿದ್ದ 290 ಗ್ರಾಂ, ಚಿನ್ನ 12 ಕೆ.ಜಿ. ಬೆಳ್ಳಿ ಆಭರಣಗಳು ಕಣ್ಮರೆಯಾಗಿದ್ದು ಕಳುವಾದ ಸ್ವತ್ತಿನ ಮೌಲ್ಯ ರು. 25 ಲಕ್ಷಕ್ಕೂ ಅಧಿಕ ಎಂದು ಅಂದಾಜಿಸಲಾಗಿದೆ.

ಕಾರವಾರದಿಂದ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿಪರಿಶೀಲಿಸಿದ್ದಾರೆ.

ಭಟ್ಕಳ ಗ್ರಾಮೀಣ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Theft Ravages Chitrapur, Bhatkal: Over Rs. 25 Lakh Worth of Gold and Silver Stolen from House

Read These Next

ಕಾರವಾರದಲ್ಲಿ ನೂತನ ಎಸ್ಪಿಯಾಗಿ ಎಂ. ನಾರಾಯಣ್ ಅಧಿಕಾರ ಸ್ವೀಕಾರ; ಕೋಮು ಸೌಹಾರ್ದತೆ ಕಾಪಾಡಲು ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಆದ್ಯತೆ

ಉತ್ತರ ಕನ್ನಡ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡಲಿದ್ದು, ಜಿಲ್ಲೆಯಲ್ಲಿನ ಅಕ್ರಮ ...

ಕುಮಟಾ-ಶಿರಸಿ ಹೆದ್ದಾರಿಯಲ್ಲಿ ನೆರೆ. ಸಂಚಾರ ಬಂದ್. ಹೊನ್ನಾವರದಲ್ಲೂ ಅಬ್ಬರಿಸುತ್ತಿದೆ ವರುಣ

ಕುಮಟಾ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಕುಮಟಾ - ಶಿರಸಿ ಹೆದ್ದಾರಿಯಲ್ಲಿ ನೀರು ನುಗ್ಗಿ ರಸ್ತೆ ಸಂಚಾರ ...

ಸಚಿವ ವೈದ್ಯರ ಗೃಹ ಕಚೇರಿಯಲ್ಲಿ ಜನತಾ ದರ್ಶನ; ಕ್ಷೇತ್ರದ ಅಭಿವೃದ್ಧಿಯ ವಿಷಯದಲ್ಲಿ ರಾಜಿಯಿಲ್ಲ ಎಂದ ಸಚಿವ

ಭಟ್ಕಳ: ಜನರ ಸಮಸ್ಯೆಗಳಿಗೆ ಸ್ಪಂಧಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಮುರುಢೇಶ್ವರದ ತಮ್ಮ ಸ್ವಗೃಹದಲ್ಲಿ ...