ಬೈಕ್ ಸವಾರರ ಮೇಲೆ ಬಿದ್ದ ಬಾರೀ ಗಾತ್ರದ ಮರ. ಸವಾರನಿಗೆ ಗಾಯ. ಆಸ್ಪತ್ರೆಗೆ ದಾಖಲು.

Source: SO News | By Laxmi Tanaya | Published on 28th June 2024, 4:33 PM | Coastal News | Don't Miss |

ಹೊನ್ನಾವರ :   ನಗರಬಸ್ತಿಕೇರಿ ಹೊನ್ನಾವರ ಮಾರ್ಗದಲ್ಲಿ ಬೃಹತ್ ಮರವೊಂದು ಬೈಕ್ ಸವಾರರ ಮೇಲೆ  ಬಿದ್ದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ತಾಲೂಕಿನ ಅನಿಲಗೋಡ ನಿವಾಸಿ, ಬೈಕ್ ಸವಾರ ಬಾಬು ನಾಯ್ಕ (52) ಗಾಯಗೊಂಡವರು. ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಅವರ ಪತ್ನಿ ಭಾಗೀರಥಿ ನಾಯ್ಕ ಅದೃಷ್ಟವಶಾತ್ ಪಾರಾಗಿದ್ದಾರೆ.   ನಗರಬಸ್ತಿಕೇರಿಯಲ್ಲಿ ತಮ್ಮ ಸಂಬಂಧಿಯೊಬ್ಬರ ಶವಸಂಸ್ಕಾರಕ್ಕೆಂದು ದಂಪತಿ ಬೈಕಿನಲ್ಲಿ . ವಾಪಸ್ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಅದೇ ಮಾರ್ಗದಲ್ಲಿ ಬರುತ್ತಿದ್ದ ಸ್ಥಳೀಯರು, ಬೈಕ್ ಸವಾರರು ಮತ್ತು ಕಾರಿನಲ್ಲಿ ಬರುತ್ತಿದ್ದ ಭಟ್ಕಳದ ಬಿಜೆಪಿ ಮುಖಂಡರಾದ ಗೋವಿಂದ ನಾಯ್ಕ, ಶ್ರೀಕಾಂತ ನಾಯ್ಕ ಮತ್ತು ಗಣಪತಿ ಗೌಡರು ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯ ಮಾಡಿ, ಗಾಯಳುವನ್ನ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ.

Read These Next

ಪತ್ರಿಕಾ ದಿನಾಚರಣೆ ಅಂಗವಾಗಿ ಹಿರಿಯ ಸಮಾಜ ಸೇವಕ ಎಸ್.ಎಸ್. ಕಾಮತ್ ರಿಗೆ ಗೌರವ ಸನ್ಮಾನ

ಭಟ್ಕಳ: ಪತ್ರಿಕಾ ದಿನಾಚರಣೆಯ ಅಂಗವಾಗಿ ಭಟ್ಕಳ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಿವೃತ್ತ ಬ್ಯಾಂಕ್ ನೌಕರ ಹಾಗೂ ಹಿರಿಯ ...

ಸಚಿವ ವೈದ್ಯರ ಗೃಹ ಕಚೇರಿಯಲ್ಲಿ ಜನತಾ ದರ್ಶನ; ಕ್ಷೇತ್ರದ ಅಭಿವೃದ್ಧಿಯ ವಿಷಯದಲ್ಲಿ ರಾಜಿಯಿಲ್ಲ ಎಂದ ಸಚಿವ

ಭಟ್ಕಳ: ಜನರ ಸಮಸ್ಯೆಗಳಿಗೆ ಸ್ಪಂಧಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಮುರುಢೇಶ್ವರದ ತಮ್ಮ ಸ್ವಗೃಹದಲ್ಲಿ ...

ಮುರುಡೇಶ್ವರ ಖಾಸಗಿ ಕ್ಲಿನಿಕ್‌ನಲ್ಲಿ ಕಾಲು ನೋವಿಗೆ ಚಿಕಿತ್ಸೆ; ಅನುಮಾನಾಸ್ಪದವಾಗಿ‌ ಮಹಿಳೆ ಸಾವು

ಮುರುಡೇಶ್ವರ ಖಾಸಗಿ ಕ್ಲಿನಿಕ್‌ನಲ್ಲಿ ಕಾಲು ನೋವಿಗೆ ಚಿಕಿತ್ಸೆ ಅನುಮಾನಾಸ್ಪದವಾಗಿ‌ ಮಹಿಳೆ ಸಾವು;ಕ್ಲಿನಿಕ್‌ ಮೇಲೆ ಎಫ್.ಐ.ಆರ್ ...