ಪ್ರವಾದಿ ಮುಹಮ್ಮದ್ ಜನ್ಮದಿನ; ಯುವಜನರಿಗಾಗಿ “ರೀಲ್ಸ್” ಸ್ಪರ್ಧೆ

Source: SOnews | By Staff Correspondent | Published on 6th September 2024, 11:34 PM | Coastal News | Don't Miss |

 

ಭಟ್ಕಳ: ಪ್ರವಾದಿ ಮುಹಮ್ಮದ್ ಪೈಗಂಬರರ ಜನ್ಮದಿನಾಚರಣೆ ನಿಮಿತ್ತ ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು ಸೆ.೧೩ ರಿಂದ ೨೨ ರ ವರೆಗೆ “ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರ್ಯವಂತ” ಎಂಬ ಶಿರ್ಷಿಕೆಯಡಿ ಅಭಿಯಾನವನ್ನು ನಡೆಸುತ್ತಿದ್ದು ಯುವ ಜನರಿಗಾಗಿ ಉ.ಕ ಜಿಲ್ಲಾ ಮಟ್ಟದ ರೀಲ್ಸ್ ಸ್ಪರ್ಧೆಯನ್ನು ಆಯೋಜಿಸಿದೆ.

ಕೆಡುಕು ಮುಕ್ತ ಸಮಾಜ, ನೈತಿಕ ಮೌಲ್ಯಗಳು, ಸಾಮಾಜಿಕ ಪಿಡುಗುಗಳು ಈ ಎಲ್ಲ ವಿಷಯಗಳ ಕುರಿತು ಪ್ರವಾದಿ ಮುಹಮ್ಮದ್ ಪೈಗಂಬರರ ಬೋಧನೆಗಳೇನು? ಸದ್ಯದ ಪರಿಸ್ಥಿತಿಯಲ್ಲಿ ಪ್ರವಾದಿ ಮುಹಮ್ಮದ್ ರ ಸಂದೇಶ ಎಷ್ಟು ಪ್ರಸ್ತುತ ಎಂಬುದರ ಕುರಿತು “ರೀಲ್ಸ್”  ಮಾಡುವುದರ ಮೂಲಕ ಯುವಜನತೆ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.

ರೀಲ್ಸ್ ಕನ್ನಡ ಭಾಷೆಯಲ್ಲಿದ್ದು, ತಮ್ಮ ತಮ್ಮ ಯೂಟ್ಯೂಬ್ ಚಾನೆಲ್, ಫೇಸ್ಬುಕ್, ಇನ್ಷ್ಟಾಗ್ರಾಂ ಖಾತೆಯಲ್ಲಿ ಅಪ್ಲೋಡ್ ಮಾಡಿ ಅದರ ಲಿಂಕ್ ನ್ನು 9886455416 ಗೆ ಕಳುಹಿಸಿಕೊಡಬಹುದು. ಸೋಶಿಯಲ್ ಮೀಡಿಯಾ ಬಳದೆ ಇದ್ದವರು ತಮ್ಮ ರೀಲ್ಸ್ ಗಳನ್ನು ವಿಡಿಯೋ ಮಾಡಿ ಸೆ.15 ರ ಒಳಗೆ ಮೇಲಿನ ಮೊಬೈಲ್ ನಂಬರ್ ವಾಟ್ಸಪ್ ಗೆ ಕಳುಹಿಸಿಕೊಡಬೇಕು. ಸ್ಪರ್ಧಾಳುಗಳು ತಮ್ಮ ಹೆಸರು, ವಯಸ್ಸು, ವಿಳಾಸ ಮತ್ತು ವಾಟ್ಸಪ್ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯವಾಗಿದೆ.

ವಿಜೇತರಿಗೆ ಕ್ರಮವಾಗಿ  ರೂ.7000, 5000, 3000 ನಗದು ಹಾಗೂ ರೂ.1000 ಗಳ ಮೂರು ಸಮಧಾನಕರ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನಿಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೇಲಿನ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಸೀರತ್ ಅಭಿಯಾನದ ಸಂಚಾಲಕ ಎಂ.ಆರ್.ಮಾನ್ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಪ್ರವಾದಿ ಮುಹಮ್ಮದ್ ರನ್ನು ಮುಸ್ಲಿಮ್ ಸಮುದಾಯಕ್ಕೆ ಮಾತ್ರ ಸೀಮಿತಗೊಳಿಸುವುದು ಬೇಡ- ಪ್ರೋ. ಆರ್.ಎಸ್.ನಾಯಕ

ಭಟ್ಕಳ: ಪ್ರವಾದಿ ಮುಹಮ್ಮದ್ ರು ಎಲ್ಲ ಸಮುದಾಯಕ್ಕಾಗಿ ಬಂದ ಪ್ರವಾದಿಯಾಗಿದ್ದು ಅವರನ್ನೂ ಕೇವಲ ಮುಸ್ಲಿಮ್ ಸಮುದಾಯಕ್ಕಾಗಿ ಮಾತ್ರ ...

ಉತ್ತರ ಕನ್ನಡದಲ್ಲಿ ಆಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಣೆ; 253 ಕಿಮೀ ಉದ್ದದ ಮಾನವ ಸರಪಳಿ ನಿರ್ಮಾಣ

ಪ್ರಜಾಪ್ರಭುತ್ವದ ಆಶಯಗಳಿಗೆ ಪ್ರಜಾಪ್ರಭುತ್ವ ವಿರೋಧಿಗಳಿಂದ ಯಾವುದೇ ಧಕ್ಕೆಯಾಗದಂತೆ ಪ್ರತಿಯೊಬ್ಬ ಸಾರ್ವಜನಿಕರ ಕೂಡಾ ...

ಭಟ್ಕಳದಲ್ಲಿ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ‍್ಯವಂತ” ಸೀರತ್ ಅಭಿಯಾನಕ್ಕೆ ಚಾಲನೆ

ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು  ಶುಕ್ರವಾರ ಭಟ್ಕಳದ ವಿವಿಧ ಮಸೀದಿಗಳಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರರ ಕುರಿತು ಜಗತ್ತಿನ ...