ಪಣಂಬೂರು: ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸಹೋದರ, ಉದ್ಯಮಿ ಹಾಗೂ ಸಾಮಾಜಿಕ ಧಾರ್ಮಿಕ ನಾಯಕ ಬಿ.ಎಂ. ಮುಮ್ತಾಝ್ ಅಲಿ ರವಿವಾರ ಬೆಳಗ್ಗಿನ ಜಾವದಿಂದ ನಾಪತ್ತೆಯಾಗಿದ್ದಾರೆ. ಅವರ ಕಾರು ಉಡುಪಿ - ಮಂಗಳೂರು ಕೂಳೂರು ಸೇತುವೆ ಮೇಲೆ ಪತ್ತೆಯಾಗಿದೆ, ಮತ್ತು ಕಾರಿನ ಮುಂಭಾಗದಲ್ಲಿ ಅಪಘಾತದ ಲಕ್ಷಣಗಳು ಕಂಡುಬಂದಿವೆ.
ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳು ಕೋಳೂರು ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದಂತೆ, "ಮುಮ್ತಾಝ್ ಅಲಿ ಕಾರು ಸೇತುವೆ ಬಳಿ ಪತ್ತೆಯಾಗಿದ್ದು, ನಾಪತ್ತೆಯಾಗಿದ್ದಾರೆ ಎಂಬ ವರದಿ ನಮಗೆ ದೊರಕಿದೆ. ಅವರು ಮಧ್ಯರಾತ್ರಿ 3 ಗಂಟೆಗೆ ಮನೆಯಿಂದ ಹೊರಟು ತಮ್ಮ ಬಿಎಂಡಬ್ಲ್ಯೂ ಕಾರಿನಲ್ಲಿ ನಗರದ ವಿವಿಧೆಡೆ ತೆರಳಿದ್ದರು. ಸೇತುವೆ ಬಳಿ ಕಾರು ಅಪಘಾತಕ್ಕೀಡಾಗಿದೆ ಎಂದು ಶಂಕಿಸಲಾಗಿದೆ. ಶೋಧ ಕಾರ್ಯ ಮುಂದುವರಿಯುತ್ತಿದೆ."
ಮಂಗಳೂರು ಉತ್ತರ ವಿಭಾಗದ ಡಿಪಿ ಮನೋಜ್ ಕುಮಾರ್ ಹಾಗೂ ಸ್ಥಳೀಯ ಪೊಲೀಸರು ಶೋಧ ಕಾರ್ಯವನ್ನು ಮುನ್ನಡೆಸುತ್ತಿದ್ದಾರೆ.