ಚಾಲಕನ ನಿಯಂತ್ರಣ ತಪ್ಪಿದ ಕಾರು; ತಪ್ಪಿದ ಅನಾಹುತ

Source: SOnews | By Staff Correspondent | Published on 5th October 2024, 10:22 AM | Coastal News |

ಭಟ್ಕಳ: ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಸ್ವಿಫ್ಟ್ ಕಾರು  ಪುರಸಭಾ ಉದ್ಯಾನವನದಲ್ಲಿ ನುಗ್ಗಿದ ಘಟನೆ ಶುಕ್ರವಾರ ರಾತ್ರಿ 11:00ಗೆ ನಡೆದಿದೆ.

ಕಾರು ಚಾಲಕನಾಗಿದ್ದ ಮೊಹಮ್ಮದ್ ಶಾಹಿದ್ ಅವರಿಗೆ ಸಣ್ಣಪುಟ್ಟ ಗಾಯಗಳಾದರೂ ಅವರು ಅಪಾಯದಿಂದ ಪಾರಾಗಿದ್ದಾರೆ. 

ವಿವರಗಳ ಪ್ರಕಾರ, ಕಾರು ಹನೀಫಾಬಾದ್ ನಿಂದ ಗುಲ್ಮಿಯತ್ತ ಸಾಗುತ್ತಿದ್ದು, ಕ್ವಾಲಿಟಿ ಹೋಟೆಲ್ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ  ನಿಯಂತ್ರಣ ತಪ್ಪಿ, ರಸ್ತೆ ಬದಿಯ ಇಳಿಜಾರಿನಲ್ಲಿ ಇದ್ದ ನಗರಸಭಾ ಉದ್ಯಾನವನದ ಒಳಕ್ಕೆ ನುಗ್ಗಿದೆ. ಅದೃಷ್ಟವಶಾತ್, ಚಾಲಕನ ಹೊರತಾಗಿ ಕಾರಿನಲ್ಲಿ ಯಾರೂ ಇದ್ದಿಲ್ಲ ಎಂದು ತಿಳಿದುಬಂದಿದೆ.

ಘಟನೆಯಾದ ತಕ್ಷಣ ಸ್ಥಳದಲ್ಲಿ ಜನ ಸೇರಿದ್ದು, ಮಾಹಿತಿ ಸಿಕ್ಕ ಕೂಡಲೇ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ಪರಿಶೀಲಿಸಿದರು.

Read These Next

ಭಟ್ಕಳ ದಿ ನ್ಯೂ ಇಂಗ್ಲೀಷ್ ಪಿ ಯು ಕಾಲೇಜಿನ 36 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಶಿರ್ಸಿ ತಾಲೂಕಿನ ಮಾರಿಕಾಂಬಾ  ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಟ್ಕಳ ...

ರಾಷ್ಟ್ರ ಮಟ್ಟದ ಡಿಸ್ಕ್ ಥ್ರೋ ಸ್ಪರ್ಧೆಯಲ್ಲಿ ಬೆಳಕೆ ನಾಗೇಂದ್ರ ನಾಯ್ಕ ತೃತೀಯ ಸ್ಥಾನ

೪ನೇ ಭಾರತೀಯ ಓಪನ್ ಯು-೨೩ ಅಥ್ಲೆಟಿಕ್ಸ್ ಸ್ಪರ್ಧೆ ೨೦೨೪ರ ಜೂನಿಯರ್ ಮತ್ತು ಅಂಡರ್ -೨೩ ಕ್ರೀಡಾಕೂಟದ ರಾಷ್ಟ್ರಮಟ್ಟದ ಡಿಸ್ಕ್ ಥ್ರೋ ...