ಬಾಲ್ಯದಲ್ಲಿ ಪ್ರೀತಿ ಸಿಗದ ಮಕ್ಕಳು, ಸಮಾಜದಲ್ಲಿ ದುಷ್ಟರಾಗಿ ಬೆಳೆಯುತ್ತಾರೆ. ಸಯೀದ್ ಇಸ್ಮಾಯಿಲ್

Source: SOnews | By Staff Correspondent | Published on 7th July 2024, 8:27 PM | Coastal News |

ಕಾಪು : ಮಕ್ಕಳಿಗೆ ತಮ್ಮ ಮನೆಯಲ್ಲಿ ತಂದೆ, ತಾಯಿ, ಸಹೋದರ, ಸಹೋದರಿಯರಿಂದ ಪ್ರೀತಿ ಸಿಗಬೇಕು. ಅದು ಸಿಗದಿದ್ದಲ್ಲಿ ಅವರಲ್ಲಿ ಕ್ರೂರತನ ಮೂಡಿ , ಮುಂದೆ ಅವರು ಸಮಾಜದಲ್ಲಿ ದುಷ್ಟರಾಗಿ ಬೆಳೆಯಲು ಕಾರಣವಾಗುತ್ತದೆ, ತಮ್ಮ ಮಕ್ಕಳು ಒಳ್ಳೆಯವರಾಗಬೇಕಿದ್ದಲ್ಲಿ , ಹೆತ್ತವರು ಕೂಡಾ ಒಳ್ಳೆಯವರಾಗಬೇಕಾಗುತ್ತದೆ. ಮಕ್ಕಳ ಮುಂದೆ ತಂದೆ, ತಾಯಿ, ಸಹೋದರ, ಸಹೋದರಿಯರು ಜಗಳವಾಡುತಿದ್ದರೆ ಮಕ್ಕಳ ಮೇಲೆ ಅದರ ದುಷ್ಪರಿಣಾಮಬೀರುತ್ತದೆ ಎಂದು ಜಮಾಆತೆ ಇಸ್ಲಾಮೀ ಹಿಂದ್ ಮಂಗಳೂರು ವಲಯ ಸಂಚಾಲಕ ಸಯೀದ್ ಇಸ್ಮಾಯಿಲ್ ಹೇಳಿದರು.

ಅವರು, ಬೋರ್ಡ್ ಆಫ್ ಇಸ್ಲಾಮಿಕ್ ಎಜುಕೇಷನ್ ಕರ್ನಾಟಕ ರಾಜ್ಯದ ವತಿಯಿಂದ ನಡೆದ ಸರ್ಟಿಫಿಕೇಟ್ ಮತ್ತು ಡಿಪ್ಲೋಮ ಕೋರ್ಸ್ ನ ಪರೀಕ್ಷೆಯಲ್ಲಿ, ಕಾಪು ಸೆಂಟರ್ ನಲ್ಲಿ ಭಾಗವಹಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಕಾಪುವಿನ ಹೊಟೇಲ್ ಕೆ. ಒನ್. ನಲ್ಲಿ ಜಮಾ ಆತೆ ಇಸ್ಲಾಮೀ ಹಿಂದ್ ವರ್ತುಲವು ಹಮ್ಮಿಕೊಂಡ, ಪ್ರಶಸ್ತಿ ಪ್ರದಾನ, ಪ್ರತಿಭಾ ಪುರಸ್ಕಾರ  ಕಾರ್ಯಕ್ರಮದ  ಅಧ್ಯಕ್ಷತೆಯನ್ನು ವಹಿಸುತ್ತಾ ಮಾತಾಡಿದರು.

ಹಲವು ಜ್ಞಾನ ಮನುಷ್ಯನಿಗೆ ಸ್ರಷ್ಟಿಕರ್ತನಿಂದ ದೊರಕುವ ಕಾರಣ ಆತ ಹೊಸ ಹೊಸ ಕೊಡುಗೆಗಳನ್ನು ಸಮಾಜಕ್ಕೆ ನೀಡುತ್ತಾನೆ. ಮೌಲ್ಯಧಾರಿತ ಶಿಕ್ಷಣವನ್ನು ನಾವು ಪಡೆದು ಅದನ್ನು ಸಮಾಜದಲ್ಲಿ ಕಾಪಾಡಿಕೊಂಡು ಬರುವುದು ನಮ್ಮ ಹೊಣೆಗಾರಿಕೆಯಾಗಿದೆ ಎಂದರು.

ಮುಖ್ಯ ಅತಿಥಿ ಯಾಗಿ ಭಾಗವಹಿಸಿದ ಖದೀಜ ಹುದಾ, ಲೌಕಿಕ ವಿದ್ಯಾಭ್ಯಾಸ ಮನುಷ್ಯನ ಇಹ ಲೋಕದ ಜೀವನಕ್ಕೆ ಸಹಕಾರಿಯಾದರೆ, ಆದ್ಯಾತ್ಮಿಕ ಶಿಕ್ಷಣವು ಆತನ ಪರಲೋಕದ ಜೀವನಕ್ಕೆ ಸಹಕಾರಿಯಾಗುತ್ತದೆ. ಆದ ಕಾರಣ ಮಾನವನು ಇಹಲೋಕದ ಶಿಕ್ಷಣವನ್ನು ದಪಡೆಯುದರೊಂದಿಗೆ, ಆಧ್ಯಾತ್ಮಿಕ ಶಿಕ್ಷಣವನ್ನೂ ಪಡೆದು ಇಹ ಮತ್ತು ಪರಲೋಕದ ಜೀವನದಲ್ಲಿ ಯಶಸ್ವಿಯಾಗಲು ಪ್ರಯತ್ನಿಸಬೇಕು ಎಂದರು.

ಮುಖ್ಯ ಅತಿಥಿ ಶಾನವಾಝ್ ಮಾತನಾಡಿ, ಇಂದಿನ ಕಾಲದಲ್ಲಿ ಮನುಷ್ಯನು ಉನ್ನತ ಮಟ್ಟದಲ್ಲಿ ವಿದ್ಯಾಭ್ಯಾಸ ಪಡೆದು ಸಮಾಜದಲ್ಲಿ ಗುರುತರವಾದ ಸ್ಥಾನ ಮಾನ ಪಡೆದಿರುತ್ತಾನೆ. ಆದರೆ ಆತನು ಕುಟುಂಬದವರೊಂದಿಗೆ ನಿರ್ದಯಿ ಯಾಗಿ ವರ್ತಿಸುತ್ತಾನೆ. ವ್ರದ್ಧ ತಂದೆ, ತಾಯಿಯವರ ಸೇವೆ ಮಾಡದೇ, ಸಹೋದರಿಯರ ಹಕ್ಕು ಕೊಡದೆ ಶೋಷಿಸಿದರೆ ಅವರು ಪಡೆದ ವಿದ್ಯಾಭ್ಯಾಸಕ್ಕೆ ಯಾವುದೇ ಬೆಲೆ ಇರುದಿಲ್ಲ ಎಂದರು. ಇನ್ನೊರ್ವ ಮುಖ್ಯ ಅತಿಥಿಯಾಗಿರುವ ಶಭೀ ಅಹಮದ್ ಕಾಝಿ ಯವರು ಮಾತಾಡಿದರು.

ಕಾರ್ಯಕ್ರಮವು ಮುಹಮ್ಮದ್ ರಾಯಿಫ್ ರವರ ಕುರ್ ಆನ್ ಪಠಣದೊಂದಿಗೆ ಪ್ರಾರಂಭವಾಯಿತು. ಜಮಾಆತೆ ಇಸ್ಲಾಮೀ ಹಿಂದ್ ಕಾಪು ವರ್ತುಲದ  ಅಧ್ಯಕ್ಷ ಅನ್ವರ್ ಅಲಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು.  ಕಾರ್ಯಕ್ರಮದಲ್ಲಿ ಬಿ. ಐ. ಇ ಯ ವಿದ್ಯಾರ್ಥಿಗಳಿಗೆ ಹಾಗೂ ಎಸ್. ಐ. ಓ ನ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. 

ವರ್ತುಲದ ಕಾರ್ಯದರ್ಶಿ ಮುಹಮ್ಮದ್ ಇಕ್ಬಾಲ್ ಧನ್ಯವಾದ ಅರ್ಪಿಸಿದರು ಅಬ್ದುಲ್ ಖಾಲಿದ್ ಕಾರ್ಯಕ್ರಮ ನಿರೂಪಿಸಿದರು. 

Read These Next

ಕಾರವಾರ: ಗ್ರಾಮ ಪಂಚಾಯತಿಗಳಲ್ಲಿ "ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ" ಅಭಿಯಾನ : ಈಶ್ವರ ಕಾಂದೂ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಉತ್ತರ ಕನ್ನಡ ಜಿಲ್ಲೆಯ 12 ತಾಲ್ಲೂಕುಗಳ ಎಲ್ಲ ಗ್ರಾಮ ...

ಉತ್ತರ ಕನ್ನಡದಲ್ಲಿ ಆಸ್ತಿಗಳ ನೋಂದಣಿಗೆ ಇ-ಆಸ್ತಿ ಮತ್ತು ಕಾವೇರಿ ತಂತ್ರಾಂಶದ ಸಂಯೋಜನೆ: ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ

ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ...