ಕಾರವಾರ: ಎಚ್.ಐ.ವಿ. ಸಂತ್ರಸ್ತರ ಮಕ್ಕಳಿಗೆ ಆರ್ಥಿಕ ನೆರವು

Source: S O News | By I.G. Bhatkali | Published on 17th September 2024, 10:36 PM | Coastal News | Don't Miss |

ಕಾರವಾರ: ಬಡ, ಮಧ್ಯಮ ವರ್ಗ, ಯಾವುದೇ ಜಾತಿ ಧರ್ಮವೆನ್ನದೇ ಹೆಚ್. ಐ. ವಿ. ಸೋಂಕಿತರ 1 ರಿಂದ 18 ವರ್ಷದವರೆಗಿನ ಮಕ್ಕಳಿಗೆ ಪ್ರತಿ ತಿಂಗಳು ರೂ.1000/- ರಂತೆ 18 ವರ್ಷದವರೆಗೆ ಸಹಾಯಧನ ನೀಡಲಾಗುತ್ತಿದೆ. 

ಈ ಯೋಜನೆ ಹೆಚ್.ಐ.ವಿ. ಪೀಡಿತರ ಮಕ್ಕಳಿಗೆ ವೈದ್ಯಕೀಯ, ಪೌಷ್ಠಿಕ ಆಹಾರ, ಶಿಕ್ಷಣ ಇತರೆ ಅವಶ್ಯಕತೆಗಳನ್ನು ಪೂರೈಸಲು ಸಹಾಯಕವಾಗಿದೆ. ಮುಖ್ಯವಾಹಿನಿಗೆ ಬರಲು ಯಾರಿಗೂ ತಿಳಿಸದೇ ಮಕ್ಕಳ ಜಂಟಿ ಖಾತೆಗಳಿಗೆ ಈ ಹಣ ಜಮಾ ಮಾಡಲಾಗುತ್ತದೆ. ಸೋಂಕಿತರ ಮಕ್ಕಳು ಎಂಬುದನ್ನು ಗೌಪ್ಯವಾಗಿಡಲಾಗುತ್ತದೆ. ಒಂದೇ ಮನೆಯಲ್ಲಿ ಐದಾರು ಮಕ್ಕಳಿದ್ದರೂ ಎಲ್ಲರೂ ಇದರ ಲಾಭ ಪಡೆದುಕೊಳ್ಳಬಹುದಾಗಿದೆ.

ದಾಖಲಾತಿಗಳು: ಮಗುವಿನ ತಂದೆ ಅಥವಾ ತಾಯಿ ಎ.ಆರ್.ಟಿ. ನೋಂದಣಿ ಕಡ್ಡಾಯ, ಮಗುವಿನ ಆಧಾರ್ ಕಾರ್ಡ ಪ್ರತಿ, ಮಗುವಿನ ಬ್ಯಾಂಕ್ ಖಾತೆಗೆ (ಓPಅI ಮ್ಯಾಪಿಂಗ್ ಮಾಡಿಸಿಕೊಳ್ಳುವುದು) ರೇಷನ್ ಕಾರ್ಡ ಪ್ರತಿ, ಮಗುವಿನ ಪಾಸ್ ಪೋರ್ಟ ಸೈಜ್ 2 ಪೋಟೊಗಳು 

ಆಯ್ಕೆ ವಿಧಾನ: ಅರ್ಜಿ ಸ್ವೀಕಾರವಾದ ನಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಛೇರಿಯಿಂದ ದಾಖಲಾತಿಗಳನ್ನು ಪರಿಶೀಲಿಸಿ, ಅರ್ಹ ಫಲಾನುಭವಿಗಳನ್ನು ಗುರುತಿಸಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಅನುಮೋದನೆ ಪಡೆದು ಆರ್ಥಿಕ ಸಹಾಯಧನವನ್ನು ಡಿಬಿಟಿ ಮುಖಾಂತರ ನೇರವಾಗಿ ಮಗುವಿನ ಖಾತೆಗೆ ಜಮೆ ಮಾಡಲಾಗುವುದು.

ಅರ್ಜಿಗಳಿಗಾಗಿ ಮತ್ತು ಹೆಚ್ಚಿನ ಮಾಹಿತಿಗಾಗಿ ಎಚ್.ಐ.ವಿ. ಪಿಡಿತ ಫಲಾನುಭವಿಗಳು ಎಲ್ಲಾ ದಾಖಲಾತಿಗಳನ್ನು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಏಡ್ಸ ನಿಯಂತ್ರಣಾಧಿಕಾರಿಗಳ ಕಛೇರಿಯ (DAPCO) ವಿಭಾಗ ಕಾರವಾರ- 581301 ನ್ನು ನವೆಂಬರ್ 30 ರೊಳಗೆ ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಜಾಲಿಯಲ್ಲಿ ಬೀಚ್ ಸ್ವಚ್ಛತಾ ಅಭಿಯಾನ: ಅಂಜುಮನ್ ಬಿಎಡ್ ವಿದ್ಯಾರ್ಥಿಗಳಿಂದ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

ಭಟ್ಕಳ: ಅಂಜುಮನ್ ಕಾಲೇಜ್ ಆಫ್ ಎಜುಕೇಶನ್ (ಬಿಎಡ್) ವಿದ್ಯಾರ್ಥಿಗಳು ಜಾಲಿ ಬೀಚ್‌ನಲ್ಲಿ ಗುರುವಾರ ಬೀಚ್ ಸ್ವಚ್ಛತಾ ಅಭಿಯಾನವನ್ನು ...

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡದ ಕ್ರಮಕ್ಕೆ ಸಂಸದ ಕಾಗೇರಿ ಕಿಡಿ: ಸೇಡಿನ ರಾಜಕೀಯ ಆರೋಪ

ಭಟ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಮಾನ ಮರ್ಯಾದೆ ರಾಷ್ಟ್ರಮಟ್ಟದಲ್ಲಿ ದಿನದಿಂದ ದಿನಕ್ಕೆ ಹರಾಜಾಗುತ್ತಿದೆಯಾದರೂ, ...

ಕಾರವಾರ: ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ; ಈಶ್ವರ್ ಕಾಂದೂ

ಉತ್ತರ ಕನ್ನಡ​​​​​​​ ಜಿಲ್ಲೆಯಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕೆಂದು ಜಿಲ್ಲಾ ...

ಸೆ. 19ರಿಂದ 24ರ ವರೆಗೆ ಉತ್ತರ ಕನ್ನಡದಲ್ಲಿ ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಕ್ರೀಡಾಪಟುಗಳ ಆಯ್ಕೆಗೆ ತಾಲ್ಲೂಕು ಮಟ್ಟದ ಸ್ಪರ್ಧೆಗಳು

ಪ್ರಸಕ್ತ ಸಾಲಿನ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಪುರುಷ ಮತ್ತು ಮಹಿಳೆಯರಿಗಾಗಿ ತಾಲ್ಲೂಕು, ಜಿಲ್ಲಾ, ವಿಭಾಗ ಹಾಗೂ ರಾಜ್ಯ ...

ಭಟ್ಕಳದಲ್ಲಿ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ‍್ಯವಂತ” ಸೀರತ್ ಅಭಿಯಾನಕ್ಕೆ ಚಾಲನೆ

ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು  ಶುಕ್ರವಾರ ಭಟ್ಕಳದ ವಿವಿಧ ಮಸೀದಿಗಳಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರರ ಕುರಿತು ಜಗತ್ತಿನ ...