ಗಂಗೊಳ್ಳಿ ಸಮೀಪ ಮೀನುಗಾರಿಕಾ ಬೋಟ್ ಮುಳುಗಡೆ. ಮೀನುಗಾರರ ರಕ್ಷಣೆ

Source: SO News | By Laxmi Tanaya | Published on 19th May 2024, 9:21 AM | Coastal News | Don't Miss |

ಗಂಗೊಳ್ಳಿ:   ಮೀನುಗಾರಿಕಾ ಬೋಟೊದು ರಿಪೇರಿಗೆ ತರುತ್ತಿರುವ ವೇಳೆ ಮುಳುಗಿದ ಘಟನೆ ಗಂಗೊಳ್ಳಿ ಅಳಿವೆ ಸಮೀಪ  ನಡೆದಿದೆ.

ವಡಭಾಂಡೇಶ್ವರ ನಿವಾಸಿ ಗೋಪಾಲ ಸುವರ್ಣ ಮಾಲೀಕತ್ವದ ಮಾಲ್ತಿದೇವಿ ಬೋಟ್ ಅವಘಡಕ್ಕೆ ಈಡಾದ ಬೋಟ್ ಆಗಿದೆ. ಬೋಟಿನಲ್ಲಿದ್ದ ಶಂಕರ ಕುಂದ‌ರ್, ಸುರೇಶ ಕುಂದ‌ರ್, ಶಂಕರ ಪೂಜಾರಿ, ಯೋಗೇಂದ್ರ, ಫರೀದ್ ಅಬ್ದುಲ್ ಘನಿ ಶೇಖ್  ಎಂಬುವವರನ್ನ ರಕ್ಷಣೆ ಮಾಡಲಾಗಿದೆ. ರಕ್ಷಣೆಗೊಳಗಾದವರು ಸಾಸ್ತಾನ ಕೋಡಿ ಕನ್ಯಾನದ ನಿವಾಸಿಗಳಾಗಿದ್ದಾರೆ.

ಮೇ 16ರಂದು ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದರು. ಮೇ 17ರಂದು ಬೆಳಗ್ಗೆ 5ಕ್ಕೆ ಭಟ್ಕಳ ಸಮೀಪ ಮತ್ತೊಂದು ಬೋಟ್ ಡಿಕ್ಕಿ ಹೊಡೆದ ಪರಿಣಾಮ ಬೋಟ್ ಅವಘಡಕ್ಕೆ  ಸಿಲುಕಿದೆಯೆನ್ನಲಾಗಿದೆ. ಬೋಟ್‌ನ  ಅಡಿಭಾಗದಲ್ಲಿ   ನೀರು ಬಂದಿದ್ದರಿಂದ ಈ ಘಟನೆ ನಡೆದಿದೆ. ಮತ್ತೊಂದು ಬೋಟ್‌ ಸಹಾಯದಿಂದ ಮೀನುಗಾರರನ್ನ ರಕ್ಷಿಸಲಾಗಿದೆ. ನಂತರ ಬೋಟನ್ನ ಗಂಗೊಳ್ಳಿ ಬಂದರಿಗೆ ತರುವಾಗ   ಅಳಿವೆಯಿಂದ ಸುಮಾರು 10 ಮಾರು ದೂರದಲ್ಲಿ ಬೋಟ್ ನೀರಿನಲ್ಲಿ ಮುಳುಗಿದೆ.
ಘಟನೆಯಲ್ಲಿ ಬೋಟ್‌ನಲ್ಲಿದ್ದ ಟ್ರಾಲ್ ಬಲೆ, ಎರಡೂವರೆ ಸಾವಿರ ಲೀ. ಡೀಸೆಲ್, ಇಂಜಿನ್, ಇನ್ನಿತರ ಸಲಕರಣೆಗಳು ಸೇರಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಹಾನಿಯಾಗಿವೆ.  ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read These Next

ಕರಾಟೆ ಪಟು ದಿ.ಕಾಶಿಫ್ ಸ್ಮರಣಾರ್ಥ; ಅ.20 ರಂದು ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿಯಿಂದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್

ಭಟ್ಕಳ: ಆಝಾದ್ ನಗರದ ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿ (AKFA), ಸಂಸ್ಥೆಯು ಕರಾಟೆ ಪಟು ದಿ.ಕಾಶಿಫ್ ರುಕ್ನುದ್ದೀನ ಸ್ಮರಣಾರ್ಥ ಅ.20 ...

16 ವರ್ಷದ ಮಕ್ಕಳಲ್ಲಿ ಪ್ರತಿರಕ್ಷಣಾತ್ಮಕ ಶಕ್ತಿ ವೃದ್ಧಿಸಲು ಭಟ್ಕಳದಲ್ಲಿ ಮಕ್ಕಳ ಲಸಿಕೆ ಅಭಿಯಾನಕ್ಕೆ ಚಾಲನೆ

ಭಟ್ಕಳ: ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವ ಮಹತ್ವದ ಪ್ರಯತ್ನದಲ್ಲಿ, ಸ್ಥಳೀಯ ಆರೋಗ್ಯ ಅಧಿಕಾರಿಗಳು ಭಟ್ಕಳದ ...

ಕಾರವಾರ: ಫೇಶಿಯಲ್ ರೆಕಗ್ನೇಶನ್ ಹಾಜರಾತಿ ರಾಜ್ಯಾದ್ಯಂತ ಜಾರಿಗೆ ಚಿಂತನೆ ; ರಿತೇಶ್ ಕುಮಾರ್ ಸಿಂಗ್

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಮೊಬೈಲ್‌ನಲ್ಲಿ ಫೇಶಿಯಲ್ ರೆಕಗ್ನೇಶನ್ ಮೂಲಕ ...

ಬೆಂಗಳೂರು: ನಿರ್ದೇಶನಾಲಯದ ಕಚೇರಿಯಲ್ಲಿ ಮಾಹಿತಿ ತಂತ್ರಜ್ಞರ ಸೇವೆ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ಕಛೇರಿಯಲ್ಲಿ ಇಲಾಖೆಯ ಯೋಜನೆಗಳನ್ನು ಸಮಪರ್ಕವಾಗಿ ಇ-ಆಫೀಸ್ ತಂತ್ರಾಂಶ ...