ಮುಂದಿನ 5 ದಿನಗಳಲ್ಲಿ ಭಾರೀ ಮಳೆ ಸಾಧ್ಯತೆ: ಇಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್

Source: S O News | By I.G. Bhatkali | Published on 9th June 2024, 7:16 AM | Coastal News | State News |

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಧಾರಾಕಾರ ಸುರಿಯುತ್ತಿದ್ದು, ಕೆಲ ಜಿಲ್ಲೆಗಳಲ್ಲಿ ಭಾರೀ ಅವಾಂತರವನ್ನು ಸೃಷ್ಟಿಸಿದೆ. ಸದ್ಯ ಭಾರೀ ಮಳೆ ಸಂಭವವಿರುವ ಕಾರಣ ಮುಂದಿನ 24 ಗಂಟೆಗಳಿಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಅರೆಂಜ್ ಅಲರ್ಟ್, ದಕ್ಷಿಣ ಕನ್ನಡ, ಬಾಗಲ ಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೂ.9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಗುಡುಗು ಸಹಿತ ಮಳೆಯಾಗಲಿದೆ. ಬೆಳಗಾವಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಗಾಳಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ 40 ರಿಂದ 50 ಕಿಲೋಮೀಟರ್ ಪ್ರತಿ ಗಂಟೆಗೆ ಗಾಳಿ ಬೀಸಲಿದ್ದು ಗುಡುಗು ಸಹಿತ ಮಳೆ ಬೀಳಲಿದೆ ಎಂದು ತಿಳಿಸಿದೆ.

ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ, ಉತ್ತರ ಒಳನಾಡಿನ ಅಲರ್ಟ್ ನೀಡದ ಹೆಚ್ಚಿನ ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.

ಮೀನುಗಾರರಿಗೆ ಎಚ್ಚರಿಕೆ: ಗಂಟೆಗೆ 45 ಕಿ.ಮೀ. ರಿಂದ 55 ಕಿ.ಮೀ. ವರೆಗೆ ಗಾಳಿ ಸಹ ಬೀಸುವ ಸಾಧ್ಯತೆ ಇದ್ದು, ರಾಜ್ಯ ಕರಾವಳಿಯ ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಮತ್ತು 21 ಡಿಗ್ರಿ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Read These Next

ಕರಾಟೆ ಪಟು ದಿ.ಕಾಶಿಫ್ ಸ್ಮರಣಾರ್ಥ; ಅ.20 ರಂದು ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿಯಿಂದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್

ಭಟ್ಕಳ: ಆಝಾದ್ ನಗರದ ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿ (AKFA), ಸಂಸ್ಥೆಯು ಕರಾಟೆ ಪಟು ದಿ.ಕಾಶಿಫ್ ರುಕ್ನುದ್ದೀನ ಸ್ಮರಣಾರ್ಥ ಅ.20 ...

16 ವರ್ಷದ ಮಕ್ಕಳಲ್ಲಿ ಪ್ರತಿರಕ್ಷಣಾತ್ಮಕ ಶಕ್ತಿ ವೃದ್ಧಿಸಲು ಭಟ್ಕಳದಲ್ಲಿ ಮಕ್ಕಳ ಲಸಿಕೆ ಅಭಿಯಾನಕ್ಕೆ ಚಾಲನೆ

ಭಟ್ಕಳ: ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವ ಮಹತ್ವದ ಪ್ರಯತ್ನದಲ್ಲಿ, ಸ್ಥಳೀಯ ಆರೋಗ್ಯ ಅಧಿಕಾರಿಗಳು ಭಟ್ಕಳದ ...

ಕಾರವಾರ: ಫೇಶಿಯಲ್ ರೆಕಗ್ನೇಶನ್ ಹಾಜರಾತಿ ರಾಜ್ಯಾದ್ಯಂತ ಜಾರಿಗೆ ಚಿಂತನೆ ; ರಿತೇಶ್ ಕುಮಾರ್ ಸಿಂಗ್

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಮೊಬೈಲ್‌ನಲ್ಲಿ ಫೇಶಿಯಲ್ ರೆಕಗ್ನೇಶನ್ ಮೂಲಕ ...

ಬೆಂಗಳೂರು: ನಿರ್ದೇಶನಾಲಯದ ಕಚೇರಿಯಲ್ಲಿ ಮಾಹಿತಿ ತಂತ್ರಜ್ಞರ ಸೇವೆ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ಕಛೇರಿಯಲ್ಲಿ ಇಲಾಖೆಯ ಯೋಜನೆಗಳನ್ನು ಸಮಪರ್ಕವಾಗಿ ಇ-ಆಫೀಸ್ ತಂತ್ರಾಂಶ ...

ಬೆಂಗಳೂರು: ರಾಷ್ಟ್ರ ದಲ್ಲಿ ರಾಜ್ಯ ಕೃಷಿ ವಿಶ್ವವಿದ್ಯಾನಿಲಯವು ಸಂಶೋಧನೆ, ಅಭಿವೃದ್ಧಿಯಲ್ಲಿ ಪ್ರಮಖ ಪಾತ್ರ ವಹಿಸಿದೆ : ಕೆ.ಎಚ್.ಮುನಿಯಪ್ಪ

ರಾಷ್ಟ್ರದಲ್ಲಿ ನಮ್ಮ ಕೃಷಿ ವಿಶ್ವವಿದ್ಯಾನಿಲಯವು ಬಹಳಷ್ಟು ದೊಡ್ಡ ಪ್ರಮಾಣದಲ್ಲಿ ಸಂಶೋಧನೆ ಮತ್ತು ಅಭಿವೃಧ್ಧಿಯಲ್ಲಿ ಪ್ರಮುಖ ...

ಬೆಂಗಳೂರು: ಭಾರಿ ಮಳೆಯಿಂದ ನಗರ ಜಲಾವೃತ; ಯಲಹಂಕ, ಟೆಕ್ ಪಾರ್ಕ್‌ಗಳು ಮತ್ತು ರೈಲು ಸೇವೆಗಳು ತತ್ತರಿಸಿತು

ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದಲ್ಲಿ ಸುರಿದ ಭಾರಿ ಮಳೆಯಿಂದ ನಗರವು ಜಲಾವೃತಗೊಂಡಿದ್ದು, ನಾಗರಿಕರ ದೈನಂದಿನ ಜೀವನ ಸಂಪೂರ್ಣ ...

ಸಿಎಂ ಆಗಿ ಅತಿ ಹೆಚ್ಚು ಬಾರಿ ಅಂಬಾರಿ ಏರಿದ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಭಾಗ್ಯ: ರಾಜ್ಯದ ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ...