ಪವರ್ ಟಿವಿ ಪ್ರಸಾರ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶ

Source: SOnews | By Staff Correspondent | Published on 26th June 2024, 3:58 PM | State News |

ಕನ್ನಡ ಸುದ್ದಿ ವಾಹಿನಿ ಪವರ್‌ ಟಿವಿ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರವನ್ನು ತಕ್ಷಣದಿಂದ ನಿಲ್ಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.

ಕೇಂದ್ರ ವಲಯದ ಐಜಿ ಬಿಆರ್‌ ರವಿಕಾಂತೇಗೌಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌ಎಂ ರಮೇಶ್‌ ಗೌಡ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣಕುಮಾರ್ ಅವರನ್ನು ಒಳಗೊಂಡ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಪವರ್‌ ಟಿವಿ ತನ್ನ ಚಾನೆಲ್‌ಗೆ ಪರವಾನಗಿ ನವೀಕರಿಸದ ಹಿನ್ನೆಲೆಯಲ್ಲಿ ಎಲ್ಲ ಕಾರ್ಯಕ್ರಮ ಸ್ಥಗಿತಗೊಳಿಸಲು ಆದೇಶಿಸಲಾಗಿದೆ. ಧರ್ಮಸ್ಥಳದ ಸೌಜನ್ಯ ಹೋರಾಟಗಾರರ ಬಗ್ಗೆ ಟೀಕೆ ಸೇರಿದಂತೆ ಹಲವಾರು ಮಾನಹಾನಿಕರ ಸುದ್ದಿಗಳನ್ನು ಬಿತ್ತರಿಸಿದ ಆರೋಪವನ್ನು ಪವರ್ ಟಿವಿ ಹೊಂದಿದೆ.

ಅರ್ಜಿದಾರರ ಪರ ಹಾಜರಾದ ಹೈಕೋರ್ಟ್‌ನ ಹಿರಿಯ ವಕೀಲ ಪ್ರಭುಲಿಂಗ ಕೆ ನಾವದಗಿ, ಸಂದೇಶ್ ಜೆ ಚೌಟ, ಡಿ ಆರ್‌ ರವಿಶಂಕರ್, “ಪ್ರತಿವಾದಿ ರಾಕೇಶ್ ಶೆಟ್ಟಿ ತನ್ನ ಟಿವಿ ಚಾನೆಲ್‌ನಲ್ಲಿ ಅರ್ಜಿದಾರರ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ. ರಾಕೇಶ್ ಶೆಟ್ಟಿ ಅವರು ತಮ್ಮ ಚಾನೆಲ್ ಅನ್ನು ಕಾನೂನುಬಾಹಿರವಾಗಿ ನಡೆಸುತ್ತಿದ್ದಾರೆ. 2021ರಿಂದಲೂ ಈ ಚಾನೆಲ್‌ನ ಪರವಾನಗಿ ನವೀಕರಣವಾಗಿಲ್ಲ” ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ವಾದವನ್ನು ಆಲಿಸಿದ ನ್ಯಾಯಪೀಠವು, “ಕೇಬಲ್‌ ಟೆಲಿವಿಷನ್‌ ನೆಟ್‌ವರ್ಕ್‌ಗಳ (ನಿಯಂತ್ರಣ) ಕಾಯಿದೆ 1995ರ ಆದೇಶ ಉಲ್ಲಂಘಿಸಿರುವ ಕಾರಣ ತಕ್ಷಣದಿಂದಲೇ ತಮ್ಮ ಚಾನೆಲ್‌ನಲ್ಲಿ ಸುದ್ದಿಗಳೂ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಜುಲೈ 8ರವರೆಗೆ ಪ್ರಸಾರ ಮಾಡಬಾರದು” ಎಂದು ಪ್ರತಿವಾದಿ ರಾಕೇಶ್ ಶೆಟ್ಟಿಗೆ ಆದೇಶಿಸಿದೆ.

Read These Next

ಬೆಂಗಳೂರು: ನಿರ್ದೇಶನಾಲಯದ ಕಚೇರಿಯಲ್ಲಿ ಮಾಹಿತಿ ತಂತ್ರಜ್ಞರ ಸೇವೆ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ಕಛೇರಿಯಲ್ಲಿ ಇಲಾಖೆಯ ಯೋಜನೆಗಳನ್ನು ಸಮಪರ್ಕವಾಗಿ ಇ-ಆಫೀಸ್ ತಂತ್ರಾಂಶ ...

ಬೆಂಗಳೂರು: ರಾಷ್ಟ್ರ ದಲ್ಲಿ ರಾಜ್ಯ ಕೃಷಿ ವಿಶ್ವವಿದ್ಯಾನಿಲಯವು ಸಂಶೋಧನೆ, ಅಭಿವೃದ್ಧಿಯಲ್ಲಿ ಪ್ರಮಖ ಪಾತ್ರ ವಹಿಸಿದೆ : ಕೆ.ಎಚ್.ಮುನಿಯಪ್ಪ

ರಾಷ್ಟ್ರದಲ್ಲಿ ನಮ್ಮ ಕೃಷಿ ವಿಶ್ವವಿದ್ಯಾನಿಲಯವು ಬಹಳಷ್ಟು ದೊಡ್ಡ ಪ್ರಮಾಣದಲ್ಲಿ ಸಂಶೋಧನೆ ಮತ್ತು ಅಭಿವೃಧ್ಧಿಯಲ್ಲಿ ಪ್ರಮುಖ ...

ಬೆಂಗಳೂರು: ಭಾರಿ ಮಳೆಯಿಂದ ನಗರ ಜಲಾವೃತ; ಯಲಹಂಕ, ಟೆಕ್ ಪಾರ್ಕ್‌ಗಳು ಮತ್ತು ರೈಲು ಸೇವೆಗಳು ತತ್ತರಿಸಿತು

ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದಲ್ಲಿ ಸುರಿದ ಭಾರಿ ಮಳೆಯಿಂದ ನಗರವು ಜಲಾವೃತಗೊಂಡಿದ್ದು, ನಾಗರಿಕರ ದೈನಂದಿನ ಜೀವನ ಸಂಪೂರ್ಣ ...

ಸಿಎಂ ಆಗಿ ಅತಿ ಹೆಚ್ಚು ಬಾರಿ ಅಂಬಾರಿ ಏರಿದ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಭಾಗ್ಯ: ರಾಜ್ಯದ ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ...