ಕಾರವಾರ: ಉದ್ಯಮಿಯ ಹತ್ಯೆ, ಪತ್ನಿಗೆ ಗಂಭೀರ ಗಾಯ – ಹಣಕೋಣ ಗ್ರಾಮದಲ್ಲಿ ದುಷ್ಕರ್ಮಿಗಳ ದಾಳಿ

Source: SOnews | By Staff Correspondent | Published on 22nd September 2024, 3:22 PM | Coastal News | Incidents |

 

ಕಾರವಾರ ತಾಲೂಕಿನ ಹಣಕೋಣ ಗ್ರಾಮದಲ್ಲಿ ಇಂದು ಮುಂಜಾನೆ ಅಪರಿಚಿತ ದುಷ್ಕರ್ಮಿಗಳು ಮನೆಯೊಂದಕ್ಕೆ ನುಗ್ಗಿ ಉದ್ಯಮಿ ವಿನಾಯಕ ನಾಯ್ಕ (54) ಅವರನ್ನು ಹತ್ಯೆಗೈದು, ಅವರ ಪತ್ನಿ ವೈಶಾಲಿ ಅವರನ್ನು ಗಂಭೀರವಾಗಿ ಗಾಯಗೊಳಿಸಿದ ಘಟನೆ ನಡೆದಿದೆ.

ವಿನಾಯಕ ಮತ್ತು ವೈಶಾಲಿ ದಂಪತಿ ಪುಣೆ ನಗರದಲ್ಲಿ ವಾಸವಿದ್ದು, ಕೈಗಾರಿಕೋದ್ಯಮ ನಡೆಸುತ್ತಿದ್ದರು. ಅವರು ಇತ್ತೀಚೆಗೆ ಸಾತೇರಿ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ಹಣಕೋಣಕ್ಕೆ ಬಂದಿದ್ದು, ತಮ್ಮ ಸ್ವಗೃಹದಲ್ಲಿ ವಾಸವಿದ್ದರು. ಇಂದು ಮುಂಜಾನೆ ದರೋಡೆಕೋರರು ದಂಪತಿಯ ಮೇಲೆ ದಾಳಿ ನಡೆಸಿದ್ದಾರೆ.

ವಿನಾಯಕ ನಾಯ್ಕ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತ್ನಿ ವೈಶಾಲಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಯನ್ನು ಚಿತ್ತಾಕುಲಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆಗೆ ಹಳೇ ವೈಷಮ್ಯ ಅಥವಾ ದರೋಡೆಯ ಕಾರಣವೇ ಎಂಬುದು ತನಿಖೆಯಿಂದ ತಿಳಿದುಬರಲಿದೆ.

Read These Next

ಸಂಸದ ಕಾಗೇರಿ ಸೂಚನೆ;  ಆಟೋ ರಿಕ್ಷಾದ ಹಿಂಬದಿ ಅಂಟಿಸಿದ “ಪ್ರೇ ಫಾರ್ ಪ್ಯಾಲಸ್ಟೈನ್” ಸ್ಟಿಕ್ಕರ್ ತೆರವು

ಭಟ್ಕಳ: ನಗರದ ಒಂದು ಆಟೋ ರಿಕ್ಷಾದ ಹಿಂಬದಿ  “ಪ್ಯಾಲಸ್ತೈನ್ ಪರ ಪ್ರಾರ್ಥನೆ” ಎಂಬ ಸ್ಟಿಕ್ಕರ್ ಅಂಟಿಸಲಾಗಿದ್ದು, ಸಂಸದ ವಿಶ್ವೇಶ್ವರ ...

ಭಟ್ಕಳ: ತಹಶೀಲ್ದಾರ್ ಮತ್ತು ಸಹಾಯಕ ಆಯುಕ್ತರ ಕಛೇರಿಗಳ ಸಿಬ್ಬಂದಿ ವರ್ಗಾವಣೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ

ಭಟ್ಕಳ: ಹಲವು ವರ್ಷಗಳಿಂದ ತಹಶೀಲ್ದಾರ್ ಕಛೇರಿ ಮತ್ತು ಸಹಾಯಕ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ...

ಜಾಲಿಯಲ್ಲಿ ಬೀಚ್ ಸ್ವಚ್ಛತಾ ಅಭಿಯಾನ: ಅಂಜುಮನ್ ಬಿಎಡ್ ವಿದ್ಯಾರ್ಥಿಗಳಿಂದ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

ಭಟ್ಕಳ: ಅಂಜುಮನ್ ಕಾಲೇಜ್ ಆಫ್ ಎಜುಕೇಶನ್ (ಬಿಎಡ್) ವಿದ್ಯಾರ್ಥಿಗಳು ಜಾಲಿ ಬೀಚ್‌ನಲ್ಲಿ ಗುರುವಾರ ಬೀಚ್ ಸ್ವಚ್ಛತಾ ಅಭಿಯಾನವನ್ನು ...

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡದ ಕ್ರಮಕ್ಕೆ ಸಂಸದ ಕಾಗೇರಿ ಕಿಡಿ: ಸೇಡಿನ ರಾಜಕೀಯ ಆರೋಪ

ಭಟ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಮಾನ ಮರ್ಯಾದೆ ರಾಷ್ಟ್ರಮಟ್ಟದಲ್ಲಿ ದಿನದಿಂದ ದಿನಕ್ಕೆ ಹರಾಜಾಗುತ್ತಿದೆಯಾದರೂ, ...