ಕೇಂದ್ರ ಸರ್ಕಾರ ಪ್ರಸ್ತಾಪಿಸಿದ ಕಸ್ತೂರಿರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ರವೀಂದ್ರ ನಾಯ್ಕ ಆಗ್ರಹ

Source: SO News | By MV Bhatkal | Published on 5th October 2024, 4:40 PM | Coastal News |

ಶಿರಸಿ:ಪಶ್ಚಿಮ ಘಟ್ಟದ ಸೂಕ್ಷö್ಮ ಪರಿಸರ ಕ್ಷೇತ್ರವನ್ನ ಗುರುತಿಸುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪ್ರಸ್ತಾಪಿಸಿದ ಕಸ್ತೂರಿರಂಗನ ವರದಿಗೆ ರಾಜ್ಯ ಸರ್ಕಾರ ತಿರಸ್ಕರಿಸಿರುವ, ಪ್ರಸ್ತಾವನೆಯಂತೆ  ಸಂಪೂರ್ಣವಾಗಿ ಕೇಂದ್ರ ಸರ್ಕಾರ ವರದಿ ತಿರಸ್ಕರಿಸುವಂತೆ ಒತ್ತಡ ತರಬೇಕೇಂದು ಅರಣ್ಯ ಭೂಮಿ ಹಕ್ಕು ಹೋರಟಗಾರರ ವೇದಿಕೆಯು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ  ಆಗ್ರಹಿಸಿತು.
ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಇಂದು ಮುಖ್ಯ ಮಂತ್ರಿಯವರ ಬೆಂಗಳೂರಿನ ಗೃಹ ಕಛೇರಿಯಲ್ಲಿ ಅವರನ್ನು ಭೇಟಿಯಾಗಿ ವರದಿ  ತಿರಸ್ಕರಿಸಿರುವುದಕ್ಕೆ  ಅಭಿನಂದನೆ  ಸಲ್ಲಿಸುತ್ತಾ,  ಮೇಲಿನಂತೆ ಅವರು ಹೇಳಿದರು.

ಕರಡು ವರದಿಯನ್ನ ತಿರಸ್ಕರಿಸಲು ಫಶ್ಚಿಮ ಘಟ್ಟ ಪ್ರದೇಶದ ಜನರ ತೀವ್ರ ವಿರೋಧದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ತಿರಸ್ಕರಿಸಿರುವುದರಿಂದ ಸ್ಪಂಧಿಸಿರುವುದಕ್ಕೆ  ರಾಜ್ಯದ ಕ್ರಮ ಸ್ವಾಗತಾರ್ಹ. ಅಲ್ಲದೇ, ಕೇಂದ್ರ ಸರ್ಕಾರದ ಮೇಲೆ ಕಸ್ತೂರಿರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸುವಂತೆ ಒತ್ತಡ ತರಲು ಅವರು ಮುಖ್ಯಮಂತ್ರಿಯಲ್ಲಿ ವಿನಂತಿಸಿಕೊAಡರು.

ಪ್ರಶಂಸನೀಯ ಕಾರ್ಯ:ಅರಣ್ಯ ಭೂಮಿ ಹೋರಾಟದ ಸ್ಮರಣ ಸಂಚಿಕೆ ಹಾಗೂ ಕಸ್ತೂರಿರಂಗನ್ ವರದಿಯಿಂದ ಉಂಟಾಗುವ ಅನಾನೂಲತೆ ಕುರಿತು  ಹೋರಾಟಗಾರರ ವೇದಿಕೆ ಪ್ರಕಟಿಸಿದ ಕರಪತ್ರ ಲಕ್ಷ ಕುಟುಂಬದಿAದ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ಆಕ್ಷೇಪಣಾ ಪತ್ರ ದಾಖಲೆಗಳನ್ನು ಪರೀಶಿಲಿಸಿ ಹೋರಾಟದ ಕಾರ್ಯಕ್ಕೆ ಮುಖ್ಯಮಂತ್ರಿಯವರು ಪ್ರಶಂಸಿಸಿದರು ಎಂದು ರವೀಂದ್ರ ನಾಯ್ಕ ತಿಳಿಸಿದರು.

Read These Next

ಕಾರವಾರ: ಗ್ರಾಮ ಪಂಚಾಯತಿಗಳಲ್ಲಿ "ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ" ಅಭಿಯಾನ : ಈಶ್ವರ ಕಾಂದೂ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಉತ್ತರ ಕನ್ನಡ ಜಿಲ್ಲೆಯ 12 ತಾಲ್ಲೂಕುಗಳ ಎಲ್ಲ ಗ್ರಾಮ ...

ಉತ್ತರ ಕನ್ನಡದಲ್ಲಿ ಆಸ್ತಿಗಳ ನೋಂದಣಿಗೆ ಇ-ಆಸ್ತಿ ಮತ್ತು ಕಾವೇರಿ ತಂತ್ರಾಂಶದ ಸಂಯೋಜನೆ: ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ

ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ...