ಕೊಪ್ಪಳ: ಮುರುಕುಂಬಿ ದಲಿತ ದೌರ್ಜನ್ಯ ಪ್ರಕರಣ – 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 3 ಜನರಿಗೆ 5 ವರ್ಷ ಜೈಲು

Source: SOnews | By Staff Correspondent | Published on 24th October 2024, 8:00 PM | State News |

 

ಕೊಪ್ಪಳ: 2015ರಲ್ಲಿ ಮುರುಕುಂಬಿ ಗ್ರಾಮದಲ್ಲಿ ನಡೆದ ದಲಿತರ ಮೇಲಿನ ದೌರ್ಜನ್ಯ ಮತ್ತು ಅವರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.

9 ವರ್ಷಗಳ ನಂತರ ನ್ಯಾಯಾಧೀಶ ಸಿ.ಚಂದ್ರಶೇಖರ್ ಅವರ ನೇತೃತ್ವದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಲಾಗಿದೆ.

ಈ ವೇಳೆ, ಮೂವರು ಅಪರಾಧಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರುವುದರಿಂದ ಜಾತಿ ನಿಂದನೆ ಕಾಯ್ದೆ ಅನ್ವಯವಾಗದೆ, ಅವರಿಗೆ 5 ವರ್ಷ ಜೈಲು ಹಾಗೂ 2,000 ರೂ. ದಂಡ ವಿಧಿಸಲಾಗಿದೆ.

ಪ್ರಕರಣದ ಹಿನ್ನೆಲೆ: 2015ರಲ್ಲಿ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ಕ್ಷೌರ ದಂಗಡಿ ಮತ್ತು ಹೋಟೆಲ್‌ಗಳಲ್ಲಿ ದಲಿತರಿಗೆ ಪ್ರವೇಶ ನಿರಾಕರಣೆ ಸಂಬಂಧ ಜಗಳ ಉಂಟಾಗಿ, ಸ್ಥಳೀಯರು ದಲಿತರ ಓಣಿಗೆ ನುಗ್ಗಿ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ಈ ಘಟನೆಗೆ ಸಂಬಂಧಿಸಿದಂತೆ 117 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದರಲ್ಲಿ ಕೆಲ ಆರೋಪಿಗಳು ಸಾವನ್ನಪ್ಪಿದ್ದು, 101 ಜನರ ಮೇಲೆ ಆರೋಪ ಸಾಬೀತು ಆಗಿದೆ.

ತೀರ್ಪಿನ ಪ್ರಕಾರ, 98 ಮಂದಿಗೆ ಜೀವಾವಧಿ ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಲಾಗಿದೆ.

Read These Next

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಅಪರಾಧಿ :ನ್ಯಾಯಾಲಯ ತೀರ್ಪು

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರ ಶಾಸಕ ಸತೀಶ್ ಸೈಲ್ ಸೇರಿದಂತೆ ಈ ...

ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷ; ರಾಜ್ಯದಾದ್ಯಂತ ವರ್ಷವಿಡೀ “ಗಾಂಧೀ ಭಾರತ” ಕಾರ್ಯಕ್ರಮ; ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ

1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವವನ್ನು ...

ಬೆಂಗಳೂರು:  ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಪ್ರತಿಷ್ಠಿತ ಮಾಲ್‍ಗಳಲ್ಲಿ ‘ಆಹಾರ ಪದಾರ್ಥಗಳ ಕಲಬೆರಕೆ' ಪತ್ತೆಗೆ ಪರೀಕ್ಷಾ ಕೇಂದ್ರ ಸ್ಥಾಪನೆ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ವತಿಯಿಂದ ಭಾರತ ಸರ್ಕಾರದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ನಿಯಮ ಮತ್ತು ...

ಭಾರೀ ಮಳೆಗೆ ಬೆಂಗಳೂರು ತತ್ತರ; ಯಲಹಂಕದಲ್ಲಿ 1 ಸಾವಿರ ಮನೆಗಳಿಗೆ ನುಗ್ಗಿದ ಮಳೆ ನೀರು

ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದ ವಿವಿಧೆಡೆ ಅವಾಂತರ ಸೃಷ್ಟಿಯಾಗಿದೆ. ಸೋಮವಾರ ರಾತ್ರಿಯೆಲ್ಲಾ ಸುರಿದು ...