ಬಾವಿಗೆ ಬಿದ್ದು ಇಬ್ಬರು ಮಕ್ಕಳ ದಾರುಣ ಸಾವು; ಇಬ್ಬರು ಗಂಭೀರ

Source: SOnews | By Staff Correspondent | Published on 30th June 2024, 8:59 PM | Coastal News |

ಕುಂದಾಪುರ: ಕುಂದಾಪುರ ತಾಲೂಕಿನ ಬೆಳಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದ್ರೋಳಿ ಎಂಬಲ್ಲಿ ಆಕಸ್ಮಿಕವಾಗಿ ಮನೆಯ ಸಮೀಪದ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮಕ್ಕಳ ತಾಯಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.

ಬಾವಿಯಲ್ಲಿ ಬಿದ್ದು ಮುಳುಗಿ ಸಾವನ್ನಪ್ಪಿರುವವರನ್ನು   ಧನ್ ರಾಜ್ (13), ಛಾಯಾ (7) ಎಂದು ಗುರುತಿಸಲಾಗಿದೆ. ಮಕ್ಕಳ ತಾಯಿ ಶೀಲಾ (34) ಮತ್ತು ತಂದೆ ಸತೀಶ್ ಮಡಿವಾಳ ಎಂಬುವವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶೀಲಾ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಆವರ  ಆರೋಗ್ಯ ಸ್ವಲ್ಪ ಸುಧಾರಿಸಿದೆ ಎಂದು ತಿಳಿದು ಬಂದಿದೆ.

ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Read These Next

ಭಟ್ಕಳದಲ್ಲಿ ಕರಾಟೆ ರೆಫ್ರಿ ತರಬೇತಿ; ತಪ್ಪು ನಿರ್ಣಯಗಳಿಂದ ಸ್ಪರ್ಧಾಳುವಿನ ಭವಿಷ್ಯ ಮಣ್ಣುಪಾಲಾಗುತ್ತದೆ-ಜೋಸ್

ಭಟ್ಕಳ : ಉತ್ತರ ಕನ್ನಡ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ ವತಿಯಿಂದ ಇಲ್ಲಿನ ಬಂದರ್ ರಸ್ತೆಯ ಕಮಲಾವತಿ ರಾಮನಾಥ ಶಾನಭಾಗ ...

ಪತ್ರಿಕಾ ದಿನಾಚರಣೆ ಅಂಗವಾಗಿ ಹಿರಿಯ ಸಮಾಜ ಸೇವಕ ಎಸ್.ಎಸ್. ಕಾಮತ್ ರಿಗೆ ಗೌರವ ಸನ್ಮಾನ

ಭಟ್ಕಳ: ಪತ್ರಿಕಾ ದಿನಾಚರಣೆಯ ಅಂಗವಾಗಿ ಭಟ್ಕಳ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಿವೃತ್ತ ಬ್ಯಾಂಕ್ ನೌಕರ ಹಾಗೂ ಹಿರಿಯ ...

ಸಚಿವ ವೈದ್ಯರ ಗೃಹ ಕಚೇರಿಯಲ್ಲಿ ಜನತಾ ದರ್ಶನ; ಕ್ಷೇತ್ರದ ಅಭಿವೃದ್ಧಿಯ ವಿಷಯದಲ್ಲಿ ರಾಜಿಯಿಲ್ಲ ಎಂದ ಸಚಿವ

ಭಟ್ಕಳ: ಜನರ ಸಮಸ್ಯೆಗಳಿಗೆ ಸ್ಪಂಧಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಮುರುಢೇಶ್ವರದ ತಮ್ಮ ಸ್ವಗೃಹದಲ್ಲಿ ...