ಭಟ್ಕಳ: ಅರಣ್ಯಭೂಮಿ ಹಕ್ಕಿನ ಹೋರಾಟದ ನೇತೃತ್ವ ವಹಿಸುತ್ತಿರುವ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ, ಭಟ್ಕಳ ಸಿಟಿ ಹಾಲ್ನಲ್ಲಿ ನಡೆದ ಅರಣ್ಯವಾಸಿಗಳ ಬೃಹತ್ ಸಭೆಯಲ್ಲಿ ಮಾತನಾಡಿದರು. ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಪ್ರೀಂ ಕೋರ್ಟ್ನಲ್ಲಿ ಅರಣ್ಯವಾಸಿಗಳ ಪರ ನಿಲುವು ಪ್ರಕಟಿಸಬೇಕೆಂದು ಒತ್ತಿ ಹೇಳಿದರು.
ಸಮಯದಲ್ಲಿ, ಪರಿಸರವಾದಿ ಸಂಘಟನೆಗಳು ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ತಿರಸ್ಕೃತವಾಗಿರುವ ಅರಣ್ಯವಾಸಿಗಳನ್ನು ಸ್ಥಳಾಂತರಿಸಲು ಒತ್ತಾಯಿಸುತ್ತಿದ್ದು, ಈ ಒತ್ತುವರಿ ಪ್ರದೇಶಗಳಲ್ಲಿ ಅರಣ್ಯೀಕರಣ ಮಾಡುವ ಪ್ರಸ್ತಾಪಗಳಿಗೆ ಸರ್ಕಾರ ಅರಣ್ಯವಾಸಿಗಳ ಪರ ನಿಲ್ಲುವುದು ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಇಲ್ಲವಾದಲ್ಲಿ ಅರಣ್ಯವಾಸಿಗಳು ತೊಂದರೆಗೆ ಒಳಗಾಗುವ ನಿರೀಕ್ಷೆಯಿದೆ ಎಂದು ನಾಯ್ಕ ಹೇಳಿದರು.
ಸಭೆಯಲ್ಲಿ ಪ್ರಮುಖರಾದ ದೇವರಾಜ ಗೊಂಡ, ಚಂದ್ರು ನಾಯ್ಕ, ಪಾಂಡುರಂಗ ನಾಯ್ಕ, ರತ್ನ ಬೆಳಕೆ, ಶ್ರೀಧರ ನಾಯ್ಕ ಹಾಡುವಳ್ಳಿ ಮತ್ತು ಖುಯುಮ ಸಾಬ್ ಮುಂತಾದವರು ಉಪಸ್ಥಿತರಿದ್ದರು. ಜಿಪಿಎಸ್ ಪುನರ್ ಪರಿಶೀಲನಾ ಮೇಲ್ಮನವಿ ಸ್ವೀಕೃತಿ ಪತ್ರವನ್ನು ಹಿರಿಯರಾದ ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ವಿತರಿಸಿದರು.
ಕಾನೂನುಹೋರಾಟ:
ಅರಣ್ಯವಾಸಿಗಳ ಪರವಾಗಿ ವೇದಿಕೆ ಕಾನೂನು ಹೋರಾಟ ಮುಂದುವರಿಸುತ್ತಿದ್ದು, ಸುಪ್ರೀಂ ಕೋರ್ಟ್ನಲ್ಲಿ ಅರಣ್ಯವಾಸಿಗಳ ಪರ ಸ್ಪಷ್ಟ ಆದೇಶ ಹೊರಬರಲು ನಿರೀಕ್ಷೆ ಇದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ವಿಶ್ವಾಸ ವ್ಯಕ್ತಪಡಿಸಿದರು.