ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಮನೆಗೆ ಲೋಕಾಯುಕ್ತ ದಾಳಿ

Source: SO News | By Laxmi Tanaya | Published on 23rd July 2024, 8:18 AM | State News | Don't Miss |

ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಪ್ರಕಾಶ್.ಜಿ.ಎನ್  ಶಿವಮೊಗ್ಗ ಅವರು ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

  ಒಟ್ಟು 3 ಸ್ಥಳಗಳಲ್ಲಿ  ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ಸ್ಥಳ ಶೋಧನೆ ಮಾಡಿದ್ದು, ಪ್ರಕಾಶ್ ಜಿ.ಎನ್ ರವರಿಗೆ ಸಂಬಂದಿಸಿದಂತೆ 1 ಖಾಲಿ ನಿವೇಶನ, 2 ಮನೆಗಳು, 2.8 ಎಕರೆ ಕೃಷಿ ಜಮೀನು ಅಂದಾಜು ಸ್ಥಿರಾಸ್ಥಿ ಮೌಲ್ಯ ರೂ 1,57,00,000/- ಕಂಡು ಬಂದಿರುತ್ತದೆ. ಹಾಗೂ ಅವರ ವಾಸದ ಮನೆಯಲ್ಲಿ ರೂ 38,32,630/- ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳು, ಅಂದಾಜು 5,20,000/-ರೂ  ಮೌಲ್ಯದ  ವಾಹನಗಳು, ಅಂದಾಜು 11,30,000/-ರೂ ಮೌಲ್ಯದ ಗೃಹಪಯೋಗಿ ವಸ್ತುಗಳು ಮತ್ತು ರೂ 12,86,500/- ನಗದು ಹಣ ಪತ್ತೆಯಾಗಿದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿ,   ಪ್ರಕಾಶ್ ಜಿ.ಎನ್ ರವರ ಪತ್ನಿ ಹೆಸರಿನಲ್ಲಿದ್ದ ಬ್ಯಾಂಕ್ ಲಾಕರ್‍ನ್ನು ಶೋಧನೆ ಮಾಡಲಾಗಿ ಈ ಬ್ಯಾಂಕ್ ಲಾಕರ್‍ನಲ್ಲಿ ರೂ,32,06,000/- ನಗದು ಹಣ ಮತ್ತು ಅಂದಾಜು ರೂ 18,48,200/- ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿದೆ.  ಅಂದಾಜು 2,05,23,330/- ರೂ ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಹಾಗೂ ಅವರ ಮನೆ ಮತ್ತು ಲಾಕರ್ ನಲ್ಲಿ  ಪತ್ತೆಯಾದ ನಗದು ರೂ 44,06,000/- ಗಳನ್ನು  ತನಿಖೆ ಸಂಬಂದ ಅಮಾನತ್ತುಪಡಿಸಿಕೊಳ್ಳಲಾಗಿದೆ.

ಪ್ರಕರಣವನ್ನು ಶಿವಮೊಗ್ಗದ ಪೊಲೀಸ್ ಅಧೀಕ್ಷಕರl ಮಂಜುನಾಥ್ ಚೌದರಿ ಎಂ.ಹೆಚ್. ರವರು ದಾಖಲಿಸಿದ್ದು, ಹೆಚ್.ಎಸ್.ಸುರೇಶ್ ಪೊಲೀಸ್ ನಿರೀಕ್ಷಕರು, ಕ.ಲೋ ಶಿವಮೊಗ್ಗ ಇವರು ತನಿಖೆಯನ್ನು ಮುಂದುವರೆಸಿದ್ದಾರೆ.

ಈ ದಾಳಿಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು, ಹಾಗೂ ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು.

Read These Next

ರಾಯಚೂರು ಜಿಲ್ಲೆಯ ಮಾನ್ವಿ ಬಳಿ ಸಾರಿಗೆ ಬಸ್ ಮತ್ತು ಖಾಸಗಿ ಶಾಲಾ ಬಸ್ ನಡುವೆ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳ ಸಾವು

ಮೃತಪಟ್ಟಿರುವ ವಿದ್ಯಾರ್ಥಿಗಳನ್ನು ಸಮರ್ಥ ಅಮರೇಶ(7) ಹಾಗೂ ಶ್ರೀಕಾಂತ್ ಮಾರೇಶ(12) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 15 ...

ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು ರೈಲು ಓಡಾಟಕ್ಕೆ ರೈಲ್ವೆ ಇಲಾಖೆ ಅಸ್ತು – ಕೇಂದ್ರ ಸಚಿವ

ತುಮಕೂರು ಜನತೆಯ ಬಹುದಿನಗಳ ಬೇಡಿಕೆಯಾದ  ರೆಗ್ಯುಲರ್ ಪ್ಯಾಸೆಂಜರ್ ಫ್ರೆಂಡ್ಲಿ ಮೆಮು ಟ್ರೈನ್ ಸರ್ವಿಸ್ ಓಡಾಟಕ್ಕೆ ರೈಲ್ವೆ ಇಲಾಖೆ ...

ತಾಯಿ ಸನ್ನಿದಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ

ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ...