ಮುರುಡೇಶ್ವರ ಸಮುದ್ರಕ್ಕಿಳಿಯದಂತೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ತಾಲೂಕಾಡಳಿತ

Source: SOnews | By Staff Correspondent | Published on 15th June 2023, 3:59 PM | Coastal News | Don't Miss |

ಭಟ್ಕಳ: ಭೈಫರ್ ಜೋಯರ ಚಂಡ ಮಾರುತ ಹಿನ್ನೆಯಲ್ಲಿ  ಅರಬ್ಬಿ ಸಮುದ್ರದಲ್ಲಿ ಭಾರಿ ಅಲೆಗಳು ಏಳುತ್ತಿದ್ದು ಸಮುದ್ರ ಪ್ರಕ್ಷುಬ್ಧಗೊಂಡಿದೆ. ಈ ಹಿನ್ನೆಲೆಯಲ್ಲಿ ಮುರುಡೇಶ್ವರದ ಸಮುದ್ರದಲ್ಲಿ ಪ್ರವಾಸಿಗರು ಇಳಿಯದಂತೆ ಎಚ್ಚರಿಕೆಯ ಸಂದೇಶವನ್ನು ನೀಡಿರುವ ಭಟ್ಕಳ ಸಹಾಯಕ ಅಯುಕ್ತೆ ಮಮತಾದೇವಿ ಜಿ.ಎಸ್. ಗುರವಾರದಿಂದ ಆ.೧೫ ಅಥವಾ ಮಳೆಗಾಲ ಮುಗಿಯುವ ವರೆಗೆ ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ.

ಚಂಡಮಾರುತದ ಆಗಮನದ ಹಿನ್ನೆಲೆಯಲ್ಲಿ ಸಮುದ್ರದ ಏರಿಳಿತ ಮತ್ತು ಬಲವಾದ ಅಲೆಗಳಿಂದ ಮಾನವ ಜೀವಕ್ಕೆ ಅಪಾಯದ ಹಿನ್ನೆಲೆಯಲ್ಲಿ ಪ್ರವಾಸಿಗರು ಸಮುದ್ರ ಪ್ರವೇಶಿಸದಂತೆ ಎಚ್ಚರಿಕೆ ಕ್ರಮಗಳನ್ನು ಜರಗಿಸಲಾಗಿದೆ ಎಂದು ತಿಳಿದುಬಂದಿದೆ.  

ಮುರ್ಡೇಶ್ವರನ ದರುಶನಕ್ಕೆಂದು ಬರುವ ಹೆಚ್ಚಿನ ಪ್ರವಾಸಿಗರು ಕಡಲ ಅಲೆಗಳೊಂದಿಗೆ ಆಟವಾಡಲು ಸಮುದ್ರಕ್ಕಿಳಿಯುತ್ತಾರೆ. ಇದರಿಂದಾಗಿ ಕಳೆದ ಮೂರು ದಿನಗಳ ಅಂತರದಲ್ಲಿ ಇಬ್ಬರು ಪ್ರವಾಸಿಗರು ಜೀವ ತೆತ್ತಿದ್ದಾರೆ. ಅಲ್ಲದೆ ಕಳೆದ ಒಂದು ತಿಂಗಳಲ್ಲಿ ಸುಮಾರು ೨೫ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ.  ಕೇವಲ ಮಳೆಗಾಲದಲ್ಲಷ್ಟೇ ಅಲ್ಲದೆ ಸಾಮಾನ್ಯ ದಿನಗಳಲ್ಲಿಯೂ ಇಂತಹ ಅವಘಡಗಳು ಮುರುಡೇಶ್ವರದಲ್ಲಿ ನಡೆಯುತ್ತಲೆ ಇರುತ್ತವೆ. ಆದರೆ ಮಳೆಗಾಲದಲ್ಲಿ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ.

ಪ್ರವಾಸಿಗರ ಸುರಕ್ಷತೆಗಾಗಿ ಕಡಲತೀರದಲ್ಲಿ ಕರಾವಳಿ ಕಾವಲು ಪಡೆಗಳನ್ನು ನಿಯೋಜಿಸಲಾಗಿದ್ದು, ಪ್ರವಾಸಿಗರಿಗೆ ಅಪಾಯದ ಬಗ್ಗೆ ಮಾಹಿತಿ ನೀಡುವ ಮತ್ತು ಸಮುದ್ರದ ಉಂಟಾಗುವ ಅನಾಹುತಗಳನ್ನು ತಡೆಯುವ ಹೊಣೆಗಾರಿಕೆ ಇದೆ. ಭಟ್ಕಳ ತಾಲೂಕಾಡಳಿತವು ಪ್ರವಾಸಿಗರಿಗೆ ಸಮುದ್ರದಲ್ಲಿ ಮುಳುಗುವ ಅಪಾಯದ ಕುರಿತು ಎಚ್ಚರಿಕೆಯ ಕ್ರಮಗಳನ್ನು ಜರುಗಿಸಿದ್ದು ಪ್ರವಾಸಿಗರಲ್ಲಿ ಪೋಸ್ಟರ್‌ಗಳ ಮೂಲಕ ಜಾಗೃತಿಯನ್ನು ಮೂಡಿಸುತ್ತಿದೆ. ಅಲ್ಲದೆ, ಸ್ಥಳೀಯ ಮೀನುಗಾರರು ಮತ್ತು ಪೊಲೀಸ್ ಅಧಿಕಾರಿಗಳು ಸಹ ಪ್ರವಾಸಿಗರು ಸಮುದ್ರಕ್ಕೆ ಪ್ರವೇಶಿಸುವುದನ್ನು ತಡೆಯಲು ಪ್ರಯತ್ನಿಸುತ್ತಾರೆ. ಆದರೆ ಸಮುದ್ರದ ಅಲೆಗಳನ್ನು ನೋಡಿದ ಪ್ರವಾಸಿಗರು ಯಾರ ಮಾತನ್ನೂ ಕೇಳಲು ಒಪ್ಪುವುದಿಲ್ಲ ಮತ್ತು ಮೋಜಿಗಾಗಿ ಸಮುದ್ರದಲ್ಲಿ ಇಳಿಯುತ್ತಾರೆ. ಇದರಿಂದಾಗಿ ಆಗಾಗ ಮಾರಾಣಾಂತಿಕ ಘಟನೆಗಳನ್ನು ಮುರುಡೇಶ್ವರದಲ್ಲಿ ವರದಿಯಾಗುತ್ತಲೆ ಇವೆ

ಈ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು ಭಟ್ಕಳ ಸಹಾಯಕ ಆಯುಕ್ತರಿಗೆ ಮುರ್ಡೇಶ್ವರ ಕಡಲತೀರದಲ್ಲಿ ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ನೀರು ನುಗ್ಗದಂತೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.  ಈ ಕುರಿತು ಕಾರ್ಯಪ್ರವೃತ್ತರಾದ ಸಹಾಯಕ ಆಯುಕ್ತರು ಬೀಚ್‌ಗೆ ಹೋಗುವ ರಸ್ತೆಯಲ್ಲಿ ಬ್ಯಾರಿಕೇಡ್‌ಗಳು ಮತ್ತು ಬ್ಯಾನರ್‌ಗಳನ್ನು ಹಾಕಿದ್ದು, ಆಗಸ್ಟ್ ಅಂತ್ಯದವರೆಗೆ ಅಥವಾ ಮಳೆಗಾಲದ ಅಂತ್ಯದವರೆಗೆ ಯಾರೂ ಸಮುದ್ರಕ್ಕೆ ಇಳಿಯದಂತೆ ಆದೇಶಿಸಿದ್ದಾರೆ. ಮತ್ತು ಯಾರಾದರೂ ಈ ಆದೇಶವನ್ನು ಉಲ್ಲಂಘಿಸಿದರೆ, ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರಗಸುವುದಾಗಿಯೂ ಎಚ್ಚರಿಕೆಯನ್ನು ನೀಡಿದ್ದಾರೆ. 

Read These Next

ಕಾರವಾರ: ಗ್ರಾಮ ಪಂಚಾಯತಿಗಳಲ್ಲಿ "ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ" ಅಭಿಯಾನ : ಈಶ್ವರ ಕಾಂದೂ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಉತ್ತರ ಕನ್ನಡ ಜಿಲ್ಲೆಯ 12 ತಾಲ್ಲೂಕುಗಳ ಎಲ್ಲ ಗ್ರಾಮ ...

ಉತ್ತರ ಕನ್ನಡದಲ್ಲಿ ಆಸ್ತಿಗಳ ನೋಂದಣಿಗೆ ಇ-ಆಸ್ತಿ ಮತ್ತು ಕಾವೇರಿ ತಂತ್ರಾಂಶದ ಸಂಯೋಜನೆ: ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ

ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ...

ಭಟ್ಕಳ ದಿ ನ್ಯೂ ಇಂಗ್ಲೀಷ್ ಪಿ ಯು ಕಾಲೇಜಿನ 36 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಶಿರ್ಸಿ ತಾಲೂಕಿನ ಮಾರಿಕಾಂಬಾ  ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಟ್ಕಳ ...