ಮುರುಢೇಶ್ವರ ಪೊಲೀಸ್ ಠಾಣೆ ಪಿ.ಎಸ್.ಐ ಮಂಜುನಾಥ್ ಅಮಾನತು

Source: SOnews | By Staff Correspondent | Published on 3rd September 2024, 9:40 PM | Coastal News | Don't Miss |

 

ಭಟ್ಕಳ: ಭಟ್ಕಳದ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಕರ್ತವ್ಯ ಲೋಪ ಎಸಗಿದ ಹಿನ್ನೆಯಲ್ಲಿ ಅಮಾನುತ್ತುಗೊಂಡಿರುವ ಬೆನ್ನ ಹಿಂದೆಯೇ ಮಂಗಳವಾರ ಮುರುಢೇಶ್ವರ ಪೊಲೀಸ್ ಠಾಣೆಯ ಪಿ.ಎಸ್.ಐ ಮಂಜುನಾಥ್ ಎಂಬುವರರನ್ನು ಕರ್ತವ್ಯ ಲೋಪ ಎಸೆಗಿದ್ದಾರೆ ಎಂದು ಆರೋಪಿಸಿ ಉ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಅವರು ಅಮಾನತ್ತುಗೊಳ್ಳಿಸಿ ಆದೇಶ ನೀಡಿದ್ದಾರೆ.

ಮುರುಡೇಶ್ವರದ ಲಾಡ್ಜ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ತಡೆಯುವಲ್ಲಿ  ಮುರುಢೇಶ್ವರ ಠಾಣಾಧಿಕಾರಿ ಮಂಜುನಾಥ್ ವಿಫಲಗೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮುರುಢೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಧಂದೆ, ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದು ಇದನ್ನು ತಡೆಯುವಲ್ಲಿ ವಿಫಲಗೊಂಡಿದ್ದಾರೆ. ಕರ್ತವ್ಯ ಪಾಲನೆಯಲ್ಲಿ ಘೋರ ಅಶಿಸ್ತು, ದುರ್ನಡತೆ ಹಾಗೂ ಬೇಜವಾಬ್ದಾರಿತನ ತೋರಿಸಿದ್ದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಬಾಕಿ ಇರಿಸಿ ತಕ್ಷಣ ಜಾರಿಗೆ ಬರುವಂತೆ ಕರ್ತವ್ಯದಿಂದ ಪಿ.ಎಸ್.ಐ ಮಂಜುನಾಥ್ ರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದು, ಅಧೀನ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡದೇ ಮತ್ತು ಮೇಲ್ವಿಚಾರಣೆ ನಡೆಸದೆ ಗ್ರಾಮೀಣ ವೃತ್ತದ ಪ್ರಭಾರ ಹೊಂದಿರುವ ಗ್ರಾಮೀಣ ಠಾಣೆ ಪೊಲೀಸ್ ನಿರೀಕ್ಷಕರ ವಿರುದ್ಧವೂ ಶಿಸ್ತುಕ್ರಮ ಜರುಗಿಸಲು ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Read These Next

ಪ್ರವಾದಿ ಮುಹಮ್ಮದ್ ರನ್ನು ಮುಸ್ಲಿಮ್ ಸಮುದಾಯಕ್ಕೆ ಮಾತ್ರ ಸೀಮಿತಗೊಳಿಸುವುದು ಬೇಡ- ಪ್ರೋ. ಆರ್.ಎಸ್.ನಾಯಕ

ಭಟ್ಕಳ: ಪ್ರವಾದಿ ಮುಹಮ್ಮದ್ ರು ಎಲ್ಲ ಸಮುದಾಯಕ್ಕಾಗಿ ಬಂದ ಪ್ರವಾದಿಯಾಗಿದ್ದು ಅವರನ್ನೂ ಕೇವಲ ಮುಸ್ಲಿಮ್ ಸಮುದಾಯಕ್ಕಾಗಿ ಮಾತ್ರ ...

ಉತ್ತರ ಕನ್ನಡದಲ್ಲಿ ಆಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಣೆ; 253 ಕಿಮೀ ಉದ್ದದ ಮಾನವ ಸರಪಳಿ ನಿರ್ಮಾಣ

ಪ್ರಜಾಪ್ರಭುತ್ವದ ಆಶಯಗಳಿಗೆ ಪ್ರಜಾಪ್ರಭುತ್ವ ವಿರೋಧಿಗಳಿಂದ ಯಾವುದೇ ಧಕ್ಕೆಯಾಗದಂತೆ ಪ್ರತಿಯೊಬ್ಬ ಸಾರ್ವಜನಿಕರ ಕೂಡಾ ...

ಭಟ್ಕಳದಲ್ಲಿ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ‍್ಯವಂತ” ಸೀರತ್ ಅಭಿಯಾನಕ್ಕೆ ಚಾಲನೆ

ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು  ಶುಕ್ರವಾರ ಭಟ್ಕಳದ ವಿವಿಧ ಮಸೀದಿಗಳಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರರ ಕುರಿತು ಜಗತ್ತಿನ ...