ಗಣೇಶ ವಿಸರ್ಜನಾ ಮೆರವಣೆಗೆ ವೇಳೆ ಹೃದಯ ಸ್ಥಂಭನಗೊಂಡು ವ್ಯಕ್ತಿ ಸಾವು

Source: SOnews | By Staff Correspondent | Published on 14th September 2024, 4:36 PM | Coastal News |

 

 

ಭಟ್ಕಳ: ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ವ್ಯಕ್ತಿಯೋರ್ವ  ರಸ್ತೆಯ ನಡುವೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಜನತಾ ಕ್ರೆಡಿಟ್ ಕೋ-ಆಪರೇಟಿವ್ ಸೂಸೈಟಿಯ ನಿವೃತ್ತ ಉದ್ಯೋಗಿ ಮಾರೂತಿ ದೇವಾಡಿಗ(೬೨) ಎಂದು ಗುರುತಿಸಲಾಗಿದೆ.

ಗಣೇಶನ ಮೂರ್ತಿಯನ್ನು ಚೌತನಿ ಬಳಿಯ ನದಿಯಲ್ಲಿ ವಿಸರ್ಜನೆ ಮಾಡಲು ಮೆರವಣಿಗೆಯಲ್ಲಿ ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಮೆರವಣಿಗೆಯಲ್ಲಿದ್ದ ಬಹುಪಾಲು ಜನರು ಕಿವಿಗಪ್ಪಳಿಸುವ ಡಿಜೆ  ಸೌಂಡಿಗೆ ಹೆಜ್ಜೆ ಹಾಕುತ್ತಿದ್ದರು ಎನ್ನಲಾಗಿದ್ದು  ಗಣೇಶನ ಮೆರವಣಿಗೆ ಹೂವಿನಪೇಟೆ ಬಳಿ ತಲುಪಿದಾಗಮಾರುತಿ ದೇವಾಡಿಗ (62) ಎಂಬವರು ಹಠಾತ್ ನೆಲಕ್ಕೆ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಅವರ ಮೃತ್ಯು ಸಂಭವಿಸಿರುವುದಾಗಿ ದೃಢಪಡಿಸಲಾಯಿತು.

ಗಣೇಶನ ಮೆರವಣಿಗೆಯಲ್ಲಿ ಸಕ್ರಿಯ ಮತ್ತು ಉತ್ಸಾಹದಿಂದ ಭಾಗವಹಿಸುತ್ತಿದ್ದ ಮಾರುತಿಯವರು ಪ್ರತೀ ವರ್ಷ ವಿಶ್ವ ಹಿಂದೂ ಪರಿಷತ್ತಿನ ವತಿಯಿಂದ ಗಣೇಶ ಪೆಂಡಾಲ ನಿರ್ವಹಿಸುತ್ತಿದ್ದರು.

Read These Next

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡದ ಕ್ರಮಕ್ಕೆ ಸಂಸದ ಕಾಗೇರಿ ಕಿಡಿ: ಸೇಡಿನ ರಾಜಕೀಯ ಆರೋಪ

ಭಟ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಮಾನ ಮರ್ಯಾದೆ ರಾಷ್ಟ್ರಮಟ್ಟದಲ್ಲಿ ದಿನದಿಂದ ದಿನಕ್ಕೆ ಹರಾಜಾಗುತ್ತಿದೆಯಾದರೂ, ...

ಕಾರವಾರ: ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ; ಈಶ್ವರ್ ಕಾಂದೂ

ಉತ್ತರ ಕನ್ನಡ​​​​​​​ ಜಿಲ್ಲೆಯಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕೆಂದು ಜಿಲ್ಲಾ ...

ಸೆ. 19ರಿಂದ 24ರ ವರೆಗೆ ಉತ್ತರ ಕನ್ನಡದಲ್ಲಿ ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಕ್ರೀಡಾಪಟುಗಳ ಆಯ್ಕೆಗೆ ತಾಲ್ಲೂಕು ಮಟ್ಟದ ಸ್ಪರ್ಧೆಗಳು

ಪ್ರಸಕ್ತ ಸಾಲಿನ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಪುರುಷ ಮತ್ತು ಮಹಿಳೆಯರಿಗಾಗಿ ತಾಲ್ಲೂಕು, ಜಿಲ್ಲಾ, ವಿಭಾಗ ಹಾಗೂ ರಾಜ್ಯ ...