ಭಟ್ಕಳದ ಹೆದ್ದಾರಿಯಲ್ಲಿ ಮತ್ತೆ ಮಳೆ ನೀರಿನ ಕಾಟ.

Source: SO News | By Laxmi Tanaya | Published on 4th July 2024, 10:50 PM | Coastal News | Don't Miss |

ಭಟ್ಕಳ :  ರಾಷ್ಟ್ರೀಯ ಹೆದ್ದಾರಿ 66ರ ರಂಗಿನಕಟ್ಟೆ ಬಳಿ ಮತ್ತೆ  ಮಳೆ ನೀರು ತುಂಬಿ ನಾಗರಿಕರಿಗೆ, ವಾಹನ ಸವಾರರಿಗೆ  ತೊಂದರೆಯಾಗುತ್ತಿದೆ.

ಮಳೆ ಆರ್ಭಟಕ್ಕೆ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ರಂಗೀಕಟ್ಟೆ ಪ್ರದೇಶದಲ್ಲಿ ಹೆದ್ದಾರಿ ಈ ಬಾರಿಯೂ ಹೊಳೆಯಾಗಿದೆ ಹೀಗಾಗಿ  ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ವರ್ಷ ಕೂಡ ಇಲ್ಲಿ ಹೆದ್ದಾರಿಯಲ್ಲಿ ನೀರು ತುಂಬಿ ಜನರಿಗೆ, ವಾಹನ ಸವಾರರಿಗೆ ತೊಂದರೆಯಾದಾಗ ಪ್ರತಿಭಟನೆ ನಡೆಸಲಾಗಿತ್ತು. ಸಚಿವರಾದ ಮಾಂಕಾಳ್ ವೈದ್ಯ ಅವರು ಸ್ಥಳಕ್ಕೆ ಆಗಮಿಸಿ ಆವಾಜ್ ಹಾಕಿದ್ದರು.
 ಆದರೂ ಸಮರ್ಪಕವಾಗಿ ಕೆಲಸವನ್ನ ಮಾಡದೇ ಇರುವುದರಿಂದ ಮತ್ತೆ ಪರಿಸ್ಥಿತಿ ಪುನರಾವರ್ತನೆಯಾಗಿದೆ.

ಅದೇ ರೀತಿ ತಾಲೂಕಿನ ಕೋಗ್ತಿ ರೋಡ್, ಡೊಂಗರಫಳ್ಳಿ, ಆಝಾದ್‌ನಗರ, ಕಾರಗದ್ದೆ ಭಾಗದ ಚರಂಡಿಯಲ್ಲಿ  ಮಣ್ಣು, ಕಲ್ಲನ್ನು ತುಂಬಿರುವುದರಿಂದ  ಕೊಚ್ಚೆಯಾಗಿದೆ. ಜಾಮೀಯಾಬಾದ್‌ನಲ್ಲಿಯೂ ಮನೆಗೆ  ಮಳೆ ನೀರು ನುಗ್ಗಿ ತೊಂದರೆಯಾಗಿದೆ.

Read These Next

ಬಾಲ್ಯದಲ್ಲಿ ಪ್ರೀತಿ ಸಿಗದ ಮಕ್ಕಳು, ಸಮಾಜದಲ್ಲಿ ದುಷ್ಟರಾಗಿ ಬೆಳೆಯುತ್ತಾರೆ. ಸಯೀದ್ ಇಸ್ಮಾಯಿಲ್

ಕಾಪು : ಮಕ್ಕಳಿಗೆ ತಮ್ಮ ಮನೆಯಲ್ಲಿ ತಂದೆ, ತಾಯಿ, ಸಹೋದರ, ಸಹೋದರಿಯರಿಂದ ಪ್ರೀತಿ ಸಿಗಬೇಕು. ಅದು ಸಿಗದಿದ್ದಲ್ಲಿ ಅವರಲ್ಲಿ ಕ್ರೂರತನ ...

ಭಾರೀ ಮಳೆಯಿಂದ ಭಟ್ಕಳ ತಾಲೂಕಿನಲ್ಲಿ ತೀವ್ರ ಜಲಾವೃತ, ವಾಹನ ಸಂಚಾರ ಸ್ಥಗಿತ; ಶಾಲಾ ಕಾಲೇಜುಗಳಿಗೆ ರಜೆ

ಭಟ್ಕಳ: ಭಾನುವಾರ ಬೆಳಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಭಟ್ಕಳ ತಾಲೂಕಿನಾದ್ಯಂತ ಹಾನಿಯನ್ನುಂಟುಮಾಡಿದೆ, ಪ್ರಮುಖ ...

ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಹಳೆಯ ನಿಶ್ಚಿತ ಪಿಂಚಣಿ  ನೀಡುವಂತೆ ಆಗ್ರಹ

ಭಟ್ಕಳ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ಭಟ್ಕಳ ತಾಲೂಕು ಘಟಕದ ಪದಾಧಿಕಾರಿಗಳು  ಹಳೆಯ ಓಪಿಎಸ್ ...

ಕಾರವಾರದಲ್ಲಿ ನೂತನ ಎಸ್ಪಿಯಾಗಿ ಎಂ. ನಾರಾಯಣ್ ಅಧಿಕಾರ ಸ್ವೀಕಾರ; ಕೋಮು ಸೌಹಾರ್ದತೆ ಕಾಪಾಡಲು ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಆದ್ಯತೆ

ಉತ್ತರ ಕನ್ನಡ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡಲಿದ್ದು, ಜಿಲ್ಲೆಯಲ್ಲಿನ ಅಕ್ರಮ ...

ಸಚಿವ ವೈದ್ಯರ ಗೃಹ ಕಚೇರಿಯಲ್ಲಿ ಜನತಾ ದರ್ಶನ; ಕ್ಷೇತ್ರದ ಅಭಿವೃದ್ಧಿಯ ವಿಷಯದಲ್ಲಿ ರಾಜಿಯಿಲ್ಲ ಎಂದ ಸಚಿವ

ಭಟ್ಕಳ: ಜನರ ಸಮಸ್ಯೆಗಳಿಗೆ ಸ್ಪಂಧಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಮುರುಢೇಶ್ವರದ ತಮ್ಮ ಸ್ವಗೃಹದಲ್ಲಿ ...