ಕಾರವಾರ: ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತು (ರಿ) ಧಾರವಾಡ ನೀಡುವ ರಾಜ್ಯ ಮಟ್ಟದ ಉತ್ತಮ ಪ್ರೌಢಶಾಲಾ ಪ್ರಶಸ್ತಿಯನ್ನು ಅಂತಾರಾಷ್ಟ್ರೀಯ ಶಿಕ್ಷಕರ ದಿನಾಚರಣೆಯಾದ ಅಕ್ಟೋಬರ್ 5 ರಂದು ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ನೀಡಲಾಗುತ್ತಿದೆ.
ರಾಜ್ಯದ ಉತ್ತಮ ಪ್ರೌಢಶಾಲೆಗಳ ಶೈಕ್ಷಣಿಕ ಮತ್ತು ಸಾಮಾಜಿಕ ಬದ್ಧತೆ ವಿದ್ಯಾರ್ಥಿಗಳ ಗುಣಾತ್ಮಕ ಶಿಕ್ಷಣ ಜೊತೆಗೆ ಸಂಸ್ಕಾರಯುತ ಕಲಿಕೆಯನ್ನು ಮಾಪನ ಮಾಡಿ, ರಾಜ್ಯದ 5 ಶಾಲೆಗಳಿಗೆ ಸದರಿ ಪ್ರಶಸ್ತಿಯನ್ನು ಘೋಷಿಸಿದ್ದು, ಅಸ್ನೋಟಿಯ ಶಿವಾಜಿ ವಿದ್ಯಾಮಂದಿರ ಈ ಪ್ರಶಸ್ತಿಗೆ ಆಯ್ಕೆಯಾಗಿದೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.