ದಾಂಡೇಲಿ: ಕಾಳಿ ನದಿಗೆ ಜಿಗಿದ ಮಹಿಳೆಯ ಮೃತದೇಹ ಪತ್ತೆ

Source: S O News | By MV Bhatkal | Published on 29th September 2024, 1:30 PM | Coastal News | Don't Miss |

ದಾಂಡೇಲಿ: ನಗರದ ಕುಳಗಿ ರಸ್ತೆಯ ಸೇತುವೆಯಿಂದ ಕಾಳಿ ನದಿಗೆ ಜಿಗಿದಿರುವ ಮಹಿಳೆಯ ಮೃತದೇಹ ದಾಂಡೇಲಿ ತಾಲೂಕಿನ ಕರಿಯಂಪಾಲಿ ಗ್ರಾಮದ ಬಳಿಯ ನದಿಯಲ್ಲಿ ಸೆ.28ರ ಪತ್ತೆಯಾಗಿದೆ.
ಮೃತ ಮಹಿಳೆ ಸ್ಥಳೀಯ ಗಣೇಶನಗರದ ನಿವಾಸಿ ರೇಖಾ ಶಿವಾನಂದ ಕಂಬಾರಗಣವಿ (41) ಎಂದು ತಿಳಿದು ಬಂದಿದೆ. 

ರೇಖಾ ಸೆ. 26ರ ಗುರುವಾರ ಮಧ್ಯಾಹ್ನ ನಾಪತ್ತೆಯಾಗಿದ್ದು, ಈ ಬಗ್ಗೆ ದಾಂಡೇಲಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸೆ.27ರ ಶುಕ್ರವಾರ ಸಂಜೆಯವರೆಗೂ ನಡೆಸಿ, ಸೆ.28ರ ಕರಿಯಂಪಾಲಿ ಗ್ರಾಮದಲ್ಲಿ ನದಿಯಲ್ಲಿ ಮೃತದೇಹ ಕಂಡುಬಂದಿದೆ. ತಕ್ಷಣ ಸ್ಥಳೀಯರು ಮಾಹಿತಿ ನೀಡಿದ್ದು, ಈ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಮೃತದೇಹ ಪತ್ತೆಹಚ್ಚಿ ನದಿಯಿಂದ ಮೇಲಕ್ಕೆ ತರಲಾಯಿತು.

ವೈಲ್ಡರ್ ನೆಸ್ಟ್, ಪ್ರೈ ಕ್ಯಾಚರ್ ಮತ್ತು ಕಾಳಿ ಅನ್ವೆಂಚರ್ ನವರ ರಾಪ್ಟ್ ಮತ್ತು ನುರಿತ ಸಿಬ್ಬಂದಿಗಳ ತಂಡದ ಜೊತೆಗೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಹಳಿಯಾಳದ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಸ್ಥಳೀಯ ಮುಳುಗು ತಜ್ಞರು ಮಹಿಳೆಯ ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡು ಅಂತಿಮವಾಗಿ ಮಹಿಳೆಯ ಮೃತ ದೇಹವನ್ನು ಪತ್ತೆ ಹಚ್ಚಿ ನದಿಯಿಂದ ಮೇಲೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ತಹಶೀಲ್ದಾ‌ರ್ ಶೈಲೇಶ ಪರಮಾನಂದ, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳದಲ್ಲಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಸ್ಥಳೀಯರು ಕೂಡ ತೆಪ್ಪದ ಮೂಲಕ ಶೋಧ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಮೃತ ದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕರೆತರಲಾಗಿದೆ.

Read These Next

ಮಂಗಳೂರು: ಸೈಬರ್ ಕ್ರೈಂ ಪೊಲೀಸ್ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ 35 ಲಕ್ಷ ರೂ. ವಂಚನೆ

ಮಾದಕ ವಸ್ತುವಿರುವ ಕೊರಿಯ‌ರ್ ನೆಪದಲ್ಲಿ ನಗರದ ವ್ಯಕ್ತಿಯೊಬ್ಬರಿಗೆ ಕರೆ ಮಾಡಿದ ಅಪರಿಚಿತರು ಸೈಬರ್ ಕ್ರೈಂ ಬ್ರಾಂಚ್ ಪೊಲೀಸರು ಎಂದು ...

ಕಾರವಾರ: ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ.

ಗ್ರಾಮೀಣ ಪ್ರದೇಶದ ಜನರಿಗೆ ಸರಕಾರದ ಅಗತ್ಯ ಸೌಲಭ್ಯಗಳ ಪೂರೈಕೆ ಹಾಗೂ ಮೂಲಭೂತ ಸಮಸ್ಯೆಗಳ ನಿವಾರಣೆಗಾಗಿ ಶ್ರಮಿಸುವ ಆರ್‌ಡಿಪಿಆರ್, ...