ಬುಲ್ಡೋಜರ್ ನ್ಯಾಯ; ಮಧ್ಯಸ್ಥಿಕೆಗಾಗಿ ಸುಪ್ರೀಂ ಕೋರ್ಟ್‌ನ್ನು ಕೋರಿದ ವಿಶ್ವಸಂಸ್ಥೆಯ ತಜ್ಞ

Source: Vb | By I.G. Bhatkali | Published on 30th September 2024, 9:55 AM | National News |

ಹೊಸದಿಲ್ಲ: ವಸತಿ ಕುರಿತು ವಿಶ್ವಸಂಸ್ಥೆಯ ವಿಶೇಷ ವರದಿಗಾರ ಪ್ರೊ. ಬಾಲಕೃಷ್ಣನ್ ರಾಜಗೋಪಾಲ್ ಅವರು ಅಂತರ್‌ರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನ ದೃಷ್ಟಿಕೋನದಿಂದ ಸೂಕ್ತ ಮಾರ್ಗಸೂಚಿಗಳನ್ನು ರೂಪಿಸಲು ಸರ್ವೋಚ್ಚ ನ್ಯಾಯಾಲಯಕ್ಕೆ ನೆರವಾಗಲು  ಬುಲ್ಡೋಜರ್ ವಿಷಯದಲ್ಲಿ ಮಧ್ಯಸ್ಥಿಕೆ ಅರ್ಜಿಯನ್ನು ಸಲ್ಲಿಸಿದ್ದಾರೆ.

ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ಕ್ರಿಮಿನಲ್ ಪ್ರಕರಣಗಳ ಆರೋಪಿಗಳ ಆಸ್ತಿಗಳನ್ನು ನೆಲಸಮಗೊಳಿಸಲು ವಿವಿಧ ರಾಜ್ಯ ಸರಕಾರಗಳಿಂದ 
ಬುಲ್ಡೋಜರ್
ಕಾರ್ಯಾಚರಣೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ನಡೆಸುತ್ತಿದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ನೇಮಕಗೊಂಡಿರುವ ತಜ್ಞರಾಗಿರುವ ಪ್ರಸ್ತಾವಿತ ಮಧ್ಯಸ್ಥಿಕೆದಾರರು, ಕಟ್ಟಡಗಳನ್ನು ನೆಲಸಮಗೊಳಿಸುವ ನಿರಂಕುಶ ಕಾರ್ಯಾಚರಣೆಗಳು ವಸತಿ ಸೌಲಭ್ಯ ಸೇರಿದಂತೆ ಅಂತರ್‌ರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿಗೆ ವಿರುದ್ದವಾಗಿವೆ ಮತ್ತು ಅಸಮಾನವಾಗಿವೆ. ಹೀಗಾಗಿ ಸೂಕ್ತ ಪ್ರಕ್ರಿಯೆಯ ಕೊರತೆಯಿದೆ ಎಂದು ಹೇಳಿದ್ದಾರೆ. ವಿಶ್ವ ಮಾನವ ಹಕ್ಕುಗಳ ಮಂಡಳಿಯ ಸದಸ್ಯನಾಗಿ ಭಾರತವು ಮಾನವ ಹಕ್ಕುಗಳನ್ನು ಗೌರವಿಸುತ್ತದೆ ಮತ್ತು ಹಕ್ಕುಗಳ ಕುರಿತು ಅದರ ವ್ಯಾಖ್ಯಾನಗಳು ಅಂತರ್‌ರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿಗೆ ಅನುಗುಣವಾಗಿದೆ ಎನ್ನುವುದನ್ನು ಖಚಿತಪಡಿಸಲು ತಾನು ಆಸಕ್ತನಾಗಿದ್ದೇನೆ ಎಂದು ಅವರು ಪ್ರತಿಪಾದಿಸಿದ್ದಾರೆ. 

ದಂಡನಾತ್ಮಕ ಕಾರಣಗಳಿಗಾಗಿ ಉದ್ದೇಶಪೂರ್ವಕವಾಗಿ ನಡೆಸಲಾದ ನಿರಂಕುಶ ನೆಲಸಮ ಕಾರ್ಯಾಚರಣೆಗಳು, ವಿಶೇಷವಾಗಿ ಅವು ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಾಗ ಅಥವಾ ಅವರ ವಿರುದ್ಧ ತಾರತಮ್ಯದ ಪರಿಣಾಮಗಳಿಗೆ ಕಾರಣವಾದಾಗ ಮಾನವ ಹಕ್ಕುಗಳ ಉಲ್ಲಂಘನೆಯ ಉಲ್ಬಣಿತ ರೂಪಗಳಾಗಿವೆ. ನೆಲಸಮ ಕಾರ್ಯಾಚರಣೆಗಳು ನಿರಾಶ್ರಿತತೆಗೆ ಕಾರಣವಾದಾಗ ಅವು ಕ್ರೌರ್ಯ, ಅಮಾನವೀಯತೆ, ಅವಮಾನಕಾರಿಯಾಗಿ ನಡೆಸಿಕೊಳ್ಳುವಿಕೆ ಅಥವಾ ಶಿಕ್ಷೆಯ ವಿರುದ್ಧ ನಿಷೇಧವನ್ನು ಉಲ್ಲಂಘಿಸಬಹುದು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

Read These Next

ಚುನಾವಣಾ ಬಾಂಡ್ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಸುಲಿಗೆ ಆರೋಪ; ಕೇಂದ್ರ ಸಚಿವೆ ನಿರ್ಮಲಾ ವಿರುದ್ಧ ಎಫ್‌ಐಆರ್

ಚುನಾವಣಾ ಬಾಂಡ್ ಮೂಲಕ ಕಾರ್ಪೊರೇಟ್ ಕಂಪೆನಿಗಳಿಂದ ಸಾವಿರಾರು ಕೋಟಿ ರೂ. ಸುಲಿಗೆ ಮಾಡಿದ ಆರೋಪದಡಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ...