ಬೈಕ್ ಸವಾರನ ಮೇಲೆ ಕಾಡು ಹಂದಿ ದಾಳಿ:ಗಂಭೀರ ಗಾಯಗೊಂಡ ಬೈಕ್ ಸವಾರ

Source: SO News | By MV Bhatkal | Published on 14th October 2024, 3:37 PM | Coastal News | Don't Miss |

ಭಟ್ಕಳ:ಇಲ್ಲಿನ ಸಾ್ಗರ ರಸ್ತೆಯ ತ್ಯಾಜ್ಯ ವಿಲೇವಾರಿ ಘಟಕದ ಎದುರು ಬೈಕ್ ಸವಾರರೊಬ್ಬರಿಗೆ ಕಾಡು ಹಂದಿಗಳ ಹಿಂಡು ಅಡ್ಡ ಬಂದಿದ್ದಲ್ಲದೇ ದಾಳಿ ಮಾಡಿ ಗಾಯಗೊಳಿಸಿದ ಘಟನೆ ನಡೆದಿದೆ.

ಮಾರುಕೇರಿಯ ಕೋಟಖಂಡದ ಕಲ್ಲಬ್ಬೆ ನಿವಾಸಿ ಗೋಪಾಲ ಮಾದೇವ ಪ್ರಭು ಎನ್ನುವವರೇ ಕಾಡು ಹಂದಿ ದಾಳಿಯಿಂದ ಗಾಯಗೊಂಡವರಾಗಿದ್ದಾರೆ. ಇವರು ಅ. 3 ರಂದು ರಾತ್ರಿ 10.30 ಗಂಟೆಗೆ ಪಟ್ಟಣದಿಂದ ಕೆಲಸ ಮುಗಿಸಿ ಮನೆಗೆ ಬೈಕಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಸಾಗರ ರಸ್ತೆಯ ತ್ಯಾಜ್ಯ ವಿಲೇವಾರಿ ಘಟಕದ ಬಳಿ ದಿಢೀರ್ ಹಂದಿಗಳ ಹಿಂಡು ಅಡ್ಡ ಬಂದಿದ್ದಲ್ಲದೇ, ಆಯತಪ್ಪಿ ಬಿದ್ದಿರುವ ಇವರಿಗೆ ದಾಳಿ ಮಾಡಿ ಎರಡು ಕೈ, ಮುಖ, ಹಣೆ ಮುಂತಾದ ಭಾಗಗಳಿಗೆ ಗಾಯಗೊಳಿಸಿದೆ. ಅಂದು ಎಚ್ಚರ ತಪ್ಪಿ ಬಿದ್ದಿದ್ದ ಇವರನ್ನು ದಾರಿಹೋಕ ಯಾರೋ ವ್ಯಕ್ತಿಗಳು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಗಂಭೀರ ಗಾಯಗೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

 

Read These Next

ಭಟ್ಕಳ: ಪ್ರವಾದಿ ನಿಂದಕ ಯತಿ ನರಸಿಂಗನಂದಾ ಸ್ವಾಮಿಯನ್ನು ದೇಶದ್ರೋಹ ಪ್ರಕರಣದಡಿ ಬಂಧಿಸುವಂತೆ ತಂಝೀಮ್ ಆಗ್ರಹ

ಭಟ್ಕಳ: ಪ್ರವಾದಿ ಮುಹಮ್ಮದ್ ಪೈಗಂಬರರನ್ನು ಅತ್ಯಂತ ಅಸಭ್ಯವಾಗಿ ನಿಂದಿಸಿದ ಮನುಷ್ಯ ವಿರೋಧಿ ಯತಿ ನರಸಿಂಹನಂದಾ ಸರಸ್ವತಿ ...

ಮುರ್ಡೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂಧಿ

ಭಟ್ಕಳ: ರಜೆ ದಿನಗಳನ್ನು ಕಳೆಯಲುದು ಬೆಂಗಳೂರಿನಿಂದ ಮರ್ಡೇಶ್ವರ ಪ್ರವಾಸಕ್ಕೆ ಬಂದಿದ್ದ 19 ವರ್ಷದ ಪುನೀತ್ ಎಂಬ ಯುವಕ ಸಮುದ್ರದಲ್ಲಿ ...

ಸಿಎಂ ಆಗಿ ಅತಿ ಹೆಚ್ಚು ಬಾರಿ ಅಂಬಾರಿ ಏರಿದ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಭಾಗ್ಯ: ರಾಜ್ಯದ ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ...