ಸಮುದ್ರದಲ್ಲಿ ಮುಳುಗುತ್ತಿದ್ದ ವ್ಯಕ್ತಿ ರಕ್ಷಿಸಿದ ಕರಾವಳಿ ಕಾವಲು ಪಡೆ ಸಿಬ್ಬಂದಿ

Source: SO News | By Laxmi Tanaya | Published on 9th September 2024, 8:16 AM | Coastal News |

ಭಟ್ಕಳ :  ಸಾರ್ವಜನಿಕ ಗಣಪತಿ ಮೂರ್ತಿಯನ್ನು  ಸಮುದ್ರದಲ್ಲಿ ವಿಸರ್ಜಿಸುವ  ವೇಳೆ ಅಲೆಗೆ ಕೊಚ್ಚಿಹೋದ ಬಾಲಕನನ್ನು ಕರಾವಳಿ ಕಾವಲು ಪಡೆಯ  ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ತಾಲೂಕಿನ ತಲಗೋಡಿನಲ್ಲಿ ನಡೆದಿದೆ.

ತಲಗೋಡು ಗ್ರಾಮದಲ್ಲಿ ಪ್ರತಿಷ್ಠಾಪಿಸಿದ ಗಣೇಶನನ್ನ ಬೀಳ್ಕೊಡುವ ವೇಳೆ ಈ ಅವಘಡ ಸಂಭವಿಸಿದೆ.  ಸಮರ್ಥ ಶ್ರೀಧರ ಖಾರ್ವಿ (14) ರಕ್ಷಣೆಯಾದ ಬಾಲಕನಾಗಿದ್ದಾನೆ. ಈತ ಬಂದರಿನ ನಿವಾಸಿ. ಭಾನುವಾರ ಸಂಜೆ ಮೂರ್ತಿ ವಿಸರ್ಜನೆ ವೇಳೆ ತಲಗೋಡು ಸಮುದ್ರದಲ್ಲಿ ಅಲೆಗೆ ಕೊಚ್ಚಿ  ಹೋಗುತ್ತಿದ್ದ. ಇದೇ ವೇಳೆ ಕರ್ತವ್ಯದಲ್ಲಿದ್ದ  ಕರಾವಳಿ ಕಾವಲು ಪಡೆಯ ಸಿಪಿಐ ಕುಸುಮಧರ ಕೆ ಮಾರ್ಗದರ್ಶನದಲ್ಲಿ ಕೆ ಎನ್ಡಿ  ಸಿಬ್ಬಂದಿ ರಾಘವೇಂದ್ರ ನಾಯ್ಕ, ಸಚಿನ ಖಾರ್ವಿ ತಮ್ಮ ಜೀವದ ಹಂಗು ತೊರೆದು ಸಮುದ್ರಕ್ಕೆ ಧುಮುಕಿ ಈಜಿ ಜೀವ ಕಾಪಾಡಿದ್ದಾರೆ.

ಕರಾವಳಿ ಕಾವಲು ಪಡೆಯ  ಪೊಲೀಸರ  ಸಾಹಸ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. ಅಸ್ವಸ್ತ ಬಾಲಕನಿಗೆ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Read These Next

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡದ ಕ್ರಮಕ್ಕೆ ಸಂಸದ ಕಾಗೇರಿ ಕಿಡಿ: ಸೇಡಿನ ರಾಜಕೀಯ ಆರೋಪ

ಭಟ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಮಾನ ಮರ್ಯಾದೆ ರಾಷ್ಟ್ರಮಟ್ಟದಲ್ಲಿ ದಿನದಿಂದ ದಿನಕ್ಕೆ ಹರಾಜಾಗುತ್ತಿದೆಯಾದರೂ, ...

ಕಾರವಾರ: ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ; ಈಶ್ವರ್ ಕಾಂದೂ

ಉತ್ತರ ಕನ್ನಡ​​​​​​​ ಜಿಲ್ಲೆಯಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕೆಂದು ಜಿಲ್ಲಾ ...

ಸೆ. 19ರಿಂದ 24ರ ವರೆಗೆ ಉತ್ತರ ಕನ್ನಡದಲ್ಲಿ ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಕ್ರೀಡಾಪಟುಗಳ ಆಯ್ಕೆಗೆ ತಾಲ್ಲೂಕು ಮಟ್ಟದ ಸ್ಪರ್ಧೆಗಳು

ಪ್ರಸಕ್ತ ಸಾಲಿನ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಪುರುಷ ಮತ್ತು ಮಹಿಳೆಯರಿಗಾಗಿ ತಾಲ್ಲೂಕು, ಜಿಲ್ಲಾ, ವಿಭಾಗ ಹಾಗೂ ರಾಜ್ಯ ...